ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ. ಅಗತ್ಯ ಬಿದ್ದರೆ ಎಸ್.ಐ.ಟಿ ರಚನೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಹೇಳಿದ್ದರು.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೆ, ನಿಮ್ಮ ಮಾತಿನ ಮೇಲೆ ಭರವಸೆಯಿದೆ. ಆದರೆ ಈ ದಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗುದುಕೊಳ್ಳಿ. ಎಸ್ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ” ಎಂದು ಅವರು ಆಗ್ರಹಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…