Featured

ಧರ್ಮಸ್ಥಳ ಪ್ರಕರಣ : ಏಳನೇ ದಿನಕ್ಕೆ ಕಾಲಿಟ್ಟ ಎಸ್ಐಟಿಯ ಶೋಧ ಕಾರ್ಯಾಚರಣೆ – vishwanews24

ದೂರುದಾರ ಗುರುತಿಸಿದ 11ನೇ ಸ್ಥಳದಲ್ಲಿ ಅಗೆಯುವಿಕೆ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ ಏಳನೇ ದಿನಕ್ಕೆ ಕಾಲಿಟ್ಟಿದೆ.

ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸಾಕ್ಷಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಎಸ್ಐಟಿ ಶೋಧ ಕಾರ್ಯ ಆರಂಭಿಸಿದೆ.

ಸೋಮವಾರದ ಕಾರ್ಯಾಚರಣೆಯ ವೇಳೆ ದೂರುದಾರನು ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಅವುಗಳನ್ನು ತಜ್ಞರ ತಂಡ ವೈಜ್ಞಾನಿಕವಾಗಿ ಸಂಗ್ರಹ ಮಾಡಿದೆ.

ಸಾಕ್ಷಿ ದೂರುದಾರು ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಇಂದು ಅಗೆಯುವ ಕಾರ್ಯ ಆರಂಭಿಸಲಾಗಿದೆ. ಇನ್ನೂ ಹಲವಡೆ ಮೃತದೇಹ ಹೂತಿರುವುದಾಗಿ ದೂರುದಾರ ಹೇಳಿರುವ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಸ್ಪಿ ದರ್ಜೆಯ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಸಹಿತ ಎಸ್ಐಟಿ ಅಧಿಕಾರಿಗಳ ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರಿನ ಕೆಎಂಸಿ ವೈದ್ಯರ ತಂಡ, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಬದಿಯಲ್ಲಿ ಸಾಕ್ಷಿ ದೂರುದಾರ ಒಟ್ಟು 13 ಜಾಗಗಳನ್ನು ತೋರಿಸಿ, ‘ಅಲ್ಲಿ ಮೃತದೇಹಗಳನ್ನು ಹೂತಿದ್ದೆ’ ಎಂದು ಎಸ್ಐಟಿಗೆ ತಿಳಿಸಿದ್ದ. ಅದರಂತೆ ಆತ ತೋರಿಸಿದ್ದ ಜಾಗಗಳಲ್ಲಿ ಜು.29ರಿಂದ ಅಗೆಯುವ ಕಾರ್ಯವನ್ನು ಎಸ್ಐಟಿ ಆರಂಭಿಸಿದೆ. ಮೂರನೇ ದಿನದ ಅಗೆಯುವಿಕೆಯ ವೇಳೆ ಆರನೇ ಜಾಗದಲ್ಲಿ ಅಸ್ಥಿಪಂಜರದ ಅವಶೇಷಗಳು ಲಭಿಸಿವೆ. ಉಳಿದ ಏಳು ಕಡೆಗಳಲ್ಲಿ ಮೃತದೇಹದ ಯಾವುದೇ ಅವಶೇಷಗಳೂ ಸಿಕ್ಕಿಲ್ಲ. ಈ ಮಧ್ಯೆ ಸೋಮವಾರ ಗುರುತಿಸಿದ ಜಾಗಕ್ಕಿಂತ ಸುಮಾರು 100 ಮೀಟರ್ ದೂರದಲ್ಲಿ ಕಾಡಿನೊಳಗೆ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago