Featured

ಧರ್ಮಸ್ಥಳ ಪ್ರಕರಣ : ತನಿಖೆಗೆ‌ ಎಸ್‌ಐಟಿ ರಚನೆ ಮಾಡಿದ ಸರ್ಕಾರ – vishwanews24

ಧರ್ಮಸ್ಥಳ ಪ್ರಕರಣ : ತನಿಖೆಗೆ‌ ಎಸ್‌ಐಟಿ ರಚನೆ ಮಾಡಿದ ಸರ್ಕಾರ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದ ಶವಗಳ ಪ್ರಕರಣದ ತನಿಖೆಗೆ ಇದೀಗ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚಿಸಿದೆ.

ಡಾ|| ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಎಂ.ಎನ್. ಅನುಚೇತ್‌, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್‌ ದಯಾಮ ಅವರು ಈ ತಂಡದಲ್ಲಿದ್ದಾರೆ.

ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ. ತನಗೆ ಜೀವ ಬೆದರಿಕೆ ಒಡ್ಡಿ, ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ನಾನೇ ಹಲವಾರು ಮೃತದೇಹಗಳನ್ನು ವಿಲೇವಾರಿ ಮಾಡಿದ್ದು, ಈಗ ಪಾಪಪ್ರಜ್ಞೆ ಕಾಡುತ್ತಿದೆ ಎಂದು ವಕೀಲರ ಮೂಲಕ ಹೇಳಿಕೊಂಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

24 minutes ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

34 minutes ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

43 minutes ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

50 minutes ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

1 hour ago