ಧರ್ಮಸ್ಥಳ ಪ್ರಕರಣ : ತನಿಖೆಯಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ: ಸಿಎಂ. ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ಧರ್ಮಸ್ಥಳ ಪ್ರಕರಣ : ತನಿಖೆಯಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ: ಸಿಎಂ. ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಸರ್ಕಾರ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ – vishwanews24

ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ. ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು – vishwanews24

Leave a Reply