ಮಂಗಳೂರು : ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ಸರಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಒಂದು ಪವಿತ್ರ ಕ್ಷೇತ್ರ ಕಟ್ಟಲು ಬಹಳಷ್ಟು ಶ್ರಮವಿದೆ. ಆ ಸಂಸ್ಥೆಯಿಂದ ಹಲವರಿಗೆ ಪ್ರಯೋಜನವಾಗಿದೆ. ಇಲಾಖೆಯ ತನಿಖೆಗೆ ಎಲ್ಲರೂ ಸಹಕಾರ ಕೊಡಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಷ್ಟರ ತನಕ ಸಮಾಧಾನದಿಂದ ಕಾಯೋಣ. ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗಬಾರದು. ಕಪ್ಪು ಚುಕ್ಕೆ ತರುವುದು ಸರಿಯಲ್ಲ ಎಂದು ಅವರು ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…