ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.
ಸಾಕ್ಷಿ ದೂರುದಾರ ಚಿನ್ನಯ್ಯ ಹಾಜರುಪಡಿಸಿದ್ದ ತಲೆಬುರುಡೆ ಇದೇ ಬಂಗ್ಲೆಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ಸೌಜನ್ಯಾಳ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಂಗ್ಲಗುಡ್ಡೆಯ 12 ಎಕರೆ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಚಿಂತನೆ ನಡೆಸಿದ್ದರು. ಇದು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಅರಣ್ಯವಾಗಿರುವುದರಿಂದ ಅರಣ್ಯ ಇಲಾಖೆಯ ಎಲ್ಲ ಅನುಮತಿ ಪಡೆದುಕೊಂಡು ಎಸ್.ಐ.ಟಿ ಇಂದು ಬೆಳಗ್ಗೆ ಬಂಗ್ಲೆಗುಡ್ಡದಲ್ಲಿ ಪರಿಶೀಲನೆಗೆ ತೆರಳಿದೆ.
ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಹಾಗೂ ಇತರ ಅಧಿಕಾರಿಗಳ ಜೊತೆಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡವು ಕಾರ್ಯಾಚರಣೆಗೆ ಇಳಿದಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…