Featured

ಧರ್ಮಸ್ಥಳ ಪ್ರಕರಣ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ – vishwanews24

ಧರ್ಮಸ್ಥಳ ಪ್ರಕರಣ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.

ಸಾಕ್ಷಿ ದೂರುದಾರ ಚಿನ್ನಯ್ಯ ಹಾಜರುಪಡಿಸಿದ್ದ ತಲೆಬುರುಡೆ ಇದೇ ಬಂಗ್ಲೆಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ಸೌಜನ್ಯಾಳ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಂಗ್ಲಗುಡ್ಡೆಯ 12 ಎಕರೆ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಚಿಂತನೆ ನಡೆಸಿದ್ದರು. ಇದು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಅರಣ್ಯವಾಗಿರುವುದರಿಂದ ಅರಣ್ಯ ಇಲಾಖೆಯ ಎಲ್ಲ ಅನುಮತಿ ಪಡೆದುಕೊಂಡು ಎಸ್.ಐ.ಟಿ ಇಂದು ಬೆಳಗ್ಗೆ ಬಂಗ್ಲೆಗುಡ್ಡದಲ್ಲಿ ಪರಿಶೀಲನೆಗೆ ತೆರಳಿದೆ.

ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಹಾಗೂ ಇತರ ಅಧಿಕಾರಿಗಳ ಜೊತೆಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡವು ಕಾರ್ಯಾಚರಣೆಗೆ ಇಳಿದಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago