Featured

ಧರ್ಮಸ್ಥಳ ಪ್ರಕರಣ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ – vishwanews24

ಧರ್ಮಸ್ಥಳ ಪ್ರಕರಣ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.

ಸಾಕ್ಷಿ ದೂರುದಾರ ಚಿನ್ನಯ್ಯ ಹಾಜರುಪಡಿಸಿದ್ದ ತಲೆಬುರುಡೆ ಇದೇ ಬಂಗ್ಲೆಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ಸೌಜನ್ಯಾಳ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಂಗ್ಲಗುಡ್ಡೆಯ 12 ಎಕರೆ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಚಿಂತನೆ ನಡೆಸಿದ್ದರು. ಇದು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಅರಣ್ಯವಾಗಿರುವುದರಿಂದ ಅರಣ್ಯ ಇಲಾಖೆಯ ಎಲ್ಲ ಅನುಮತಿ ಪಡೆದುಕೊಂಡು ಎಸ್.ಐ.ಟಿ ಇಂದು ಬೆಳಗ್ಗೆ ಬಂಗ್ಲೆಗುಡ್ಡದಲ್ಲಿ ಪರಿಶೀಲನೆಗೆ ತೆರಳಿದೆ.

ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಹಾಗೂ ಇತರ ಅಧಿಕಾರಿಗಳ ಜೊತೆಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡವು ಕಾರ್ಯಾಚರಣೆಗೆ ಇಳಿದಿದೆ.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

13 hours ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

13 hours ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

14 hours ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

17 hours ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

17 hours ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

17 hours ago