ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.
ಸಾಕ್ಷಿ ದೂರುದಾರ ಚಿನ್ನಯ್ಯ ಹಾಜರುಪಡಿಸಿದ್ದ ತಲೆಬುರುಡೆ ಇದೇ ಬಂಗ್ಲೆಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ಸೌಜನ್ಯಾಳ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಂಗ್ಲಗುಡ್ಡೆಯ 12 ಎಕರೆ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಚಿಂತನೆ ನಡೆಸಿದ್ದರು. ಇದು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಅರಣ್ಯವಾಗಿರುವುದರಿಂದ ಅರಣ್ಯ ಇಲಾಖೆಯ ಎಲ್ಲ ಅನುಮತಿ ಪಡೆದುಕೊಂಡು ಎಸ್.ಐ.ಟಿ ಇಂದು ಬೆಳಗ್ಗೆ ಬಂಗ್ಲೆಗುಡ್ಡದಲ್ಲಿ ಪರಿಶೀಲನೆಗೆ ತೆರಳಿದೆ.
ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಹಾಗೂ ಇತರ ಅಧಿಕಾರಿಗಳ ಜೊತೆಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡವು ಕಾರ್ಯಾಚರಣೆಗೆ ಇಳಿದಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…