Featured

ಧರ್ಮಸ್ಥಳ ಪ್ರಕರಣ : ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ.- vishwanews24

ಧರ್ಮಸ್ಥಳ ಪ್ರಕರಣ : ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ.

ಮಂಗಳೂರು: ʼಧರ್ಮಸ್ಥಳʼ ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ʼಧರ್ಮಸ್ಥಳʼ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಹೇಳಿಕೆ ನೀಡಿದ್ದಾರೆ.

ಸಾಕ್ಷಿ, ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ, ಸಾಕ್ಷಿ, ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್‌ಐಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ, ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತಿತರ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದಾರೆ. ಇದರ ಆಧಾರದಲ್ಲಿ ಸ್ಥಳೀಯ ಅನೇಕರು ಸಾಕ್ಷಿ, ದೂರುದಾರರನ್ನು ಅಂದಾಜಿಸಿರುತ್ತಾರೆ. ಆದರೆ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಡಿಎಸ್ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago