ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27 ರ ವರೆಗೆ ನಡೆಯಲಿವೆ.
ನ.25 ರಂದು ಸೋಮವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ ಎಂಬತ್ತ ಏಳನೆ ಅಧಿವೇಶನವನ್ನು ನಿಕಟಪೂರ್ವ ಲೋಕಸಭಾ ಅಧ್ಯಕ್ಷರಾದ ಸುಮಿತ್ರಾ ಮಹಾಜನ್ ಉದ್ಘಾಟಿಸುವರು.
ಇಸ್ಕಾನ್ ಸಂಸ್ಥೆಯ ಗೌರ್ ಗೋಪಾಲ ದಾಸ್ ಅಧ್ಯಕ್ಷತೆ ವಹಿಸುವರು.ಮೈಸೂರಿನ ಫೋಕಸ್ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಟಿ. ರಾಮಾನುಜಮ್, ದಿ ಟೈಮ್ಸ್ ಗ್ರೂಪ್ಸ್ ನ ಉಪ ಮಹಾಪ್ರಬಂಧಕ ಕದ್ರಿ ನವನೀತ ಶೆಟ್ಟಿ ಮತ್ತು ಪುತ್ತೂರಿನ ಖ್ಯಾತ ಲೇಖಕ ಬೊಳುವಾರು ಮಹ್ಮದ್ ಕುಂಞ ಧಾರ್ಮಿಕ ಉಪನ್ಯಾಸ ನೀಡುವರು.
ವಿದ್ವಾನ್ ಡಾ. ಕೆ. ವಾಗೀಶ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಇದೇ 26 ರಂದು ಸಾಹಿತ್ಯ ಸಮ್ಮೇಳನದ ಅಧಿವೇಶನವನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಉದ್ಘಾಟಿಸುವರು. ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸುವರು
ಸಾಹಿತಿ ಕುಮಟಾದ ಶ್ರೀಧರ ಬಳಗಾರ, ಉಡುಪಿಯ ವೀಣಾ ಬನ್ನಂಜೆ ಮತ್ತು ವಾಗ್ಮಿ ರಿಚರ್ಡ್ ಲೂಯಿಸ್ ಉಪನ್ಯಾಸ ನೀಡುವರು. ವಿದ್ವಾನ್ ಅಶೋಕ್ ಕುಮಾರ್ ಮತ್ತು ಬಳಗದವರಿಂದ ಕಥಕ್ ನೃತ್ಯ ರೂಪಕ ಪ್ರದರ್ಶನವಿದೆ. ರಾತ್ರಿ 12 ಗಂಟೆ ಬಳಿಕ ನಡೆಯುವ ಲಕ್ಷದೀಪೋತ್ಸವಕ್ಕೆ ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಭಾಗಿಯಾಗುವರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…