ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27 ರ ವರೆಗೆ ನಡೆಯಲಿವೆ.
ನ.25 ರಂದು ಸೋಮವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ ಎಂಬತ್ತ ಏಳನೆ ಅಧಿವೇಶನವನ್ನು ನಿಕಟಪೂರ್ವ ಲೋಕಸಭಾ ಅಧ್ಯಕ್ಷರಾದ ಸುಮಿತ್ರಾ ಮಹಾಜನ್ ಉದ್ಘಾಟಿಸುವರು.
ಇಸ್ಕಾನ್ ಸಂಸ್ಥೆಯ ಗೌರ್ ಗೋಪಾಲ ದಾಸ್ ಅಧ್ಯಕ್ಷತೆ ವಹಿಸುವರು.ಮೈಸೂರಿನ ಫೋಕಸ್ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಟಿ. ರಾಮಾನುಜಮ್, ದಿ ಟೈಮ್ಸ್ ಗ್ರೂಪ್ಸ್ ನ ಉಪ ಮಹಾಪ್ರಬಂಧಕ ಕದ್ರಿ ನವನೀತ ಶೆಟ್ಟಿ ಮತ್ತು ಪುತ್ತೂರಿನ ಖ್ಯಾತ ಲೇಖಕ ಬೊಳುವಾರು ಮಹ್ಮದ್ ಕುಂಞ ಧಾರ್ಮಿಕ ಉಪನ್ಯಾಸ ನೀಡುವರು.
ವಿದ್ವಾನ್ ಡಾ. ಕೆ. ವಾಗೀಶ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಇದೇ 26 ರಂದು ಸಾಹಿತ್ಯ ಸಮ್ಮೇಳನದ ಅಧಿವೇಶನವನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಉದ್ಘಾಟಿಸುವರು. ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸುವರು
ಸಾಹಿತಿ ಕುಮಟಾದ ಶ್ರೀಧರ ಬಳಗಾರ, ಉಡುಪಿಯ ವೀಣಾ ಬನ್ನಂಜೆ ಮತ್ತು ವಾಗ್ಮಿ ರಿಚರ್ಡ್ ಲೂಯಿಸ್ ಉಪನ್ಯಾಸ ನೀಡುವರು. ವಿದ್ವಾನ್ ಅಶೋಕ್ ಕುಮಾರ್ ಮತ್ತು ಬಳಗದವರಿಂದ ಕಥಕ್ ನೃತ್ಯ ರೂಪಕ ಪ್ರದರ್ಶನವಿದೆ. ರಾತ್ರಿ 12 ಗಂಟೆ ಬಳಿಕ ನಡೆಯುವ ಲಕ್ಷದೀಪೋತ್ಸವಕ್ಕೆ ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಭಾಗಿಯಾಗುವರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…