Featured

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ

ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ ನಡೆದಿತ್ತು. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಕೊಡಲಿ ಪೆಟ್ಟು ಕೊಡುವ ಷಡ್ಯಂತ್ರ ನಡೆದಿತ್ತು ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದನ್ನೂ ಪರಾಮರ್ಶೆ ಮಾಡದೇ ಯಾರೋ ಬೀದಿಯಲ್ಲಿ ಹೋಗುವವರು ಹೇಳಿದರೆಂದು ಎಸ್ಐಟಿ ತನಿಖೆಗೆ ಆದೇಶಿಸಿದ್ದು ಸಮರ್ಪಕ ನಿರ್ಧಾರ ಆಗಿರಲಿಲ್ಲ ಎಂದು ಆಕ್ಷೇಪಿಸಿದರು.

ಇದನ್ನೂ ಓದಿ :

ಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಏಕಾಏಕಿ ಎಸ್ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಒಂದು ದಿನ ಮೊದಲು ಯಾವುದೇ ತನಿಖೆಯ ಅವಶ್ಯಕತೆ ಇಲ್ಲ ಎಂದಿದ್ದರು. ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿದ ನಂತರ ಮುಖ್ಯಮಂತ್ರಿಯವರೇ ಎಸ್ಐಟಿ ತನಿಖೆಗೆ ಆದೇಶಿಸಿದ್ದರು ಎಂದು ಆರೋಪಿಸಿದರು.

ಈ ಪ್ರಕರಣದಲ್ಲಿ ನೂರಾರು ಕೋಟಿ ರೂ. ಒಳಗೊಂಡದ್ದು ಈಗ ಗೊತ್ತಾಗುತ್ತಿದೆ. ಈ ಕಾರಣಕ್ಕೆ ವಿದೇಶಿ ಶಕ್ತಿಗಳ ಕೈವಾಡದ ತನಿಖೆಯೂ ಆಗಬೇಕಿದೆ ಎಂದು ವಿಜಯೇಂದ್ರ ಒತ್ತಾಯಿಸಿದರು.

ಇದನ್ನೂ ಓದಿ :

ಕಾಂಗ್ರೆಸ್ ಸರಕಾರವು ಇಂಥ ಷಡ್ಯಂತ್ರಗಳಿಗೆ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮಗೆ ನೋವು ತಂದಿದೆ. ಯಾರ್ಯಾರು ಇದರ ಹಿಂದಿದ್ದರು? ಯಾರ್ಯಾರು ಬಂಡವಾಳ ಹಾಕಿದ್ದರು? ಅಂದಿನ ಸಿಎಂ ಯಾಕೆ ಕಣ್ಮುಚ್ಚಿ ಎಸ್ಐಟಿಗೆ ಕೊಟ್ಟರು- ಇವೆಲ್ಲದರ ಸತ್ಯಾಸತ್ಯತೆ ಹೊರಕ್ಕೆ ಬರಬೇಕು ಎಂಬುದು ಅವರು ಒತ್ತಾಯಿಸಿದರು.

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್ಐಆರ್ ಬಗ್ಗೆ ಚರ್ಚೆಗಳಾಗಿವೆ. ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದ ಬಳಿಕ ಎಸ್ಐಆರ್ ನಡೆಯುತ್ತಿದ್ದು, ರಾಜ್ಯ ಸರಕಾರ ಇದಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದೆ ಎಂಬ ಅಭಿಪ್ರಾಯ ಎಲ್ಲ ಮುಖಂಡರಿಂದ ವ್ಯಕ್ತವಾಗಿದೆ ಎಂದು ವಿಜಯೇಂದ್ರ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯ ಸರಕಾರವು ಬಿಎಲ್ ಒಗಳಿಗೆ ಸಮರ್ಪಕ ಆದೇಶ, ಮಾರ್ಗದರ್ಶನ ಮಾಡುತ್ತಿಲ್ಲ. ಡುಪ್ಲಿಕೇಟ್ ಹೆಸರು, ಸತ್ತವರ ಹೆಸರು ಕೈಬಿಡುವ ಕೆಲಸ ನಡೆಯಬೇಕಿದೆ. ಬಿಎಲ್ ಒಗಳನ್ನು ದುರುಪಯೋಗ ಪಡಿಸಿಕೊಂಡು, ಸ್ವಚ್ಛಗೊಳಿಸುವ ಕಾರ್ಯ ಕರ್ನಾಟಕದಲ್ಲಿ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ಆಕ್ಷೇಪ ಇದೆ ಎಂದು ಅವರು ಹೇಳಿದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

7 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

10 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

10 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

10 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

10 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

10 hours ago