ಮಂಗಳೂರು : ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ಹೆತ್ತವರು ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.
2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜು. 15 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆಗಮಿಸಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.
ಅಸ್ಥಿ ಸಿಕ್ಕಿದರೆ ಸಂಪ್ರದಾಯ ಪ್ರಕಾರ ಅಂತ್ಯ ಸಂಸ್ಕಾರ: ಸಾಯುವುದಕ್ಕಿಂತ ಮೊದಲು ಮಗಳ ಮೃತದೇಹದ ಅಸ್ಥಿ ಏನಾದರೂ ದೊರೆತರೆ, ಸನಾತನ ಹಿಂದೂ ಧರ್ಮದ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ನಡೆಸುವ ಆಲೋಚನೆಯಲ್ಲಿ ಹೊರಟಿರುವೆನು. ನನಗೆ ಈಗ ಬೇರೆ ಏನು ಉಳಿದಿಲ್ಲ. ಮಗಳು ನಾಪತ್ತೆ ಪ್ರಕರಣದಲ್ಲಿ ನ್ಯಾಯ ದೊರಕಬೇಕು ಎಂದು ತಾಯಿ ಸುಜಾತ ಭಟ್ ತಿಳಿಸಿದ್ದಾರೆ.
ಅನನ್ಯ ನಾಪಕ್ಕೆ ಪ್ರಕರಣದ ಬಗ್ಗೆ ದೂರು ನೀಡುವ ಕಾರಣಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದೇವೆ. ಆದರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಸುಜಾತ ಭಟ್ ಪರ ವಕೀಲರಾದ ಮಂಜುನಾಥ್ ಎನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…