ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ಮಾರ್ಗಸೂಚಿ ಗಮನದಲ್ಲಿರಿಸಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬದಲಾಗಿ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದ ಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕರ್ತರ ಮೂಲಕ ವಧುವಿನ ಮನೆಗೆ ತಲುಪಿಸಲಾಗುವುದು.
ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ಡೌನ್ ಘೋಷಣೆ..Vishwanews24
ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ಊರ ದೇವರ ಅಥವಾ ಕುಲದೇವರ ಸನ್ನಿಧಿಗಳಲ್ಲಿ ಶಾಸ್ತ್ರೋಕ್ತವಾಗಿ ಏ. 29 ರಂದು ನಿಗದಿಯಾಗಿರುವ ಗೋಧೂಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಹಾಗೂ ಮುಹೂರ್ತದಲ್ಲಿ ಮದುವೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮದುವೆಯನ್ನು ಸರಳವಾಗಿ ಸರಕಾರದ ಕೋವಿಡ್ ನಿಯಮಾವಳಿಯಂತೆ ನಡೆಸಲು ತಿಳಿಸಲಾಗಿದೆ.
ಮದುವೆ ಸಂದರ್ಭ ಯೋಜನೆಯ ಕಾರ್ಯಕರ್ತರೊಬ್ಬರು ಹಾಜರಿರುವರು. ಬಳಿಕ ಕಾನೂನಿನಂತೆ ವಿವಾಹ ನೋಂದಣಿಯನ್ನು ತಾಲೂಕಿನ ಉಪ ನೋಂದಣಿ ಅಧಿಕಾರಿ ಅವರಲ್ಲಿ ಮಾಡಿಸಿಕೊಳ್ಳಲು ಸೂಚಿಸಿದೆ. ಅನಂತರ ವಿವಾಹ ನೋಂದಣಿ ದಾಖಲಾತಿ ಪತ್ರದ ಜೆರಾಕ್ಸ್ ಪ್ರತಿಯನ್ನು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಅರ್ಪಿಸಲು ಕ್ಷೇತ್ರಕ್ಕೆ ಕಳುಹಿಸಿಕೊಡುವಂತೆ ತಿಳಿಸಲಾಗಿದೆ.
ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಗೆ ಕೊರೊನಾ ಪಾಸಿಟಿವ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…