Featured

ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು -Vishwanews24

ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು -Vishwanews24

ನೋಂದಣಿದಾರರಿಗೆ ಪರ್ಯಾಯ ವ್ಯವಸ್ಥೆ..

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ಮಾರ್ಗಸೂಚಿ ಗಮನದಲ್ಲಿರಿಸಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬದಲಾಗಿ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದ ಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕರ್ತರ ಮೂಲಕ ವಧುವಿನ ಮನೆಗೆ ತಲುಪಿಸಲಾಗುವುದು.

ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24

ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ಊರ ದೇವರ ಅಥವಾ ಕುಲದೇವರ ಸನ್ನಿಧಿಗಳಲ್ಲಿ ಶಾಸ್ತ್ರೋಕ್ತವಾಗಿ ಏ. 29 ರಂದು ನಿಗದಿಯಾಗಿರುವ ಗೋಧೂಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಹಾಗೂ ಮುಹೂರ್ತದಲ್ಲಿ ಮದುವೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮದುವೆಯನ್ನು ಸರಳವಾಗಿ ಸರಕಾರದ ಕೋವಿಡ್ ನಿಯಮಾವಳಿಯಂತೆ ನಡೆಸಲು ತಿಳಿಸಲಾಗಿದೆ.

ಮದುವೆ ಸಂದರ್ಭ ಯೋಜನೆಯ ಕಾರ್ಯಕರ್ತರೊಬ್ಬರು ಹಾಜರಿರುವರು. ಬಳಿಕ ಕಾನೂನಿನಂತೆ ವಿವಾಹ ನೋಂದಣಿಯನ್ನು ತಾಲೂಕಿನ ಉಪ ನೋಂದಣಿ ಅಧಿಕಾರಿ ಅವರಲ್ಲಿ ಮಾಡಿಸಿಕೊಳ್ಳಲು ಸೂಚಿಸಿದೆ. ಅನಂತರ ವಿವಾಹ ನೋಂದಣಿ ದಾಖಲಾತಿ ಪತ್ರದ ಜೆರಾಕ್ಸ್ ಪ್ರತಿಯನ್ನು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಅರ್ಪಿಸಲು ಕ್ಷೇತ್ರಕ್ಕೆ ಕಳುಹಿಸಿಕೊಡುವಂತೆ ತಿಳಿಸಲಾಗಿದೆ.

ಕಾಂಗ್ರೆಸ್‌ ಮುಖಂಡ ಮಧು ಬಂಗಾರಪ್ಪ ಗೆ ಕೊರೊನಾ ಪಾಸಿಟಿವ್ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago