ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ಮಾರ್ಗಸೂಚಿ ಗಮನದಲ್ಲಿರಿಸಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬದಲಾಗಿ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದ ಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕರ್ತರ ಮೂಲಕ ವಧುವಿನ ಮನೆಗೆ ತಲುಪಿಸಲಾಗುವುದು.
ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ಡೌನ್ ಘೋಷಣೆ..Vishwanews24
ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ಊರ ದೇವರ ಅಥವಾ ಕುಲದೇವರ ಸನ್ನಿಧಿಗಳಲ್ಲಿ ಶಾಸ್ತ್ರೋಕ್ತವಾಗಿ ಏ. 29 ರಂದು ನಿಗದಿಯಾಗಿರುವ ಗೋಧೂಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಹಾಗೂ ಮುಹೂರ್ತದಲ್ಲಿ ಮದುವೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮದುವೆಯನ್ನು ಸರಳವಾಗಿ ಸರಕಾರದ ಕೋವಿಡ್ ನಿಯಮಾವಳಿಯಂತೆ ನಡೆಸಲು ತಿಳಿಸಲಾಗಿದೆ.
ಮದುವೆ ಸಂದರ್ಭ ಯೋಜನೆಯ ಕಾರ್ಯಕರ್ತರೊಬ್ಬರು ಹಾಜರಿರುವರು. ಬಳಿಕ ಕಾನೂನಿನಂತೆ ವಿವಾಹ ನೋಂದಣಿಯನ್ನು ತಾಲೂಕಿನ ಉಪ ನೋಂದಣಿ ಅಧಿಕಾರಿ ಅವರಲ್ಲಿ ಮಾಡಿಸಿಕೊಳ್ಳಲು ಸೂಚಿಸಿದೆ. ಅನಂತರ ವಿವಾಹ ನೋಂದಣಿ ದಾಖಲಾತಿ ಪತ್ರದ ಜೆರಾಕ್ಸ್ ಪ್ರತಿಯನ್ನು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಅರ್ಪಿಸಲು ಕ್ಷೇತ್ರಕ್ಕೆ ಕಳುಹಿಸಿಕೊಡುವಂತೆ ತಿಳಿಸಲಾಗಿದೆ.
ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಗೆ ಕೊರೊನಾ ಪಾಸಿಟಿವ್ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…