ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

Featured, ರಾಜ್ಯ ನ್ಯೂಸ್

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.

ಧರ್ಮಸ್ಥಳದಲ್ಲಿ ಈ ಹಿಂದೆ ಯೋಜಿಸಲಾಗಿದ್ದ ‘ಆಣೆ-ಪ್ರಮಾಣ’ ನಿರ್ಧಾರ ರದ್ದಾದ ಬೆನ್ನಲ್ಲೇ ವಿಜಯೇಂದ್ರ ಅವರು ಗುರುವಾರ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಇಂದಿನ ಭೇಟಿ ವೇಳೆ ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್‌ ಚೌಟ ಮತ್ತು ಕರಾವಳಿ ಭಾಗದ ಶಾಸಕರು ಸಾಥ್‌ ನೀಡಿದರು.

ಇದನ್ನೂ ಓದಿ: 

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಅಡ್ಡ ಮತದಾನ ಮಾಡಿದವರ ಪತ್ತೆಗೆ ಹಾಗೂ ಪಕ್ಷದೊಳಗಿನ ಭಿನ್ನಮತ ಶಮನಗೊಳಿಸಲು ವಿಜಯೆಂದ್ರ ಈಗ ದೇವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಜಯೇಂದ್ರ ನಡೆಸಿದ ಈ ಭೇಟಿ ಕೇವಲ ಧಾರ್ಮಿಕ ಭೇಟಿಯಲ್ಲ, ಬದಲಿಗೆ ಇದೊಂದು ರಾಜಕೀಯ ‘ಧರ್ಮ ಪರೀಕ್ಷೆ’ ಎಂಬ ಮಾತುಗಳು ಕೇಳಿಬರುತ್ತಿವೆ.

Leave a Reply