Featured

ಧರ್ಮೇಗೌಡರ ಆತ್ಮಹತ್ಯೆ ಇದು ರಾಜಕಾರಣದ ಕೊಲೆ ; ಈ ದಿನ ನನಗೆ ಮರೆಯಲಾಗದು : ತೀವ್ರ ಸಂತಾಪ ವ್ಯಕ್ತಪಡಿಸಿ ಕಣ್ಣೀರು ಹಾಕಿದ ಹೆಚ್ ಡಿ ಕೆ -Vishwanews24

ಧರ್ಮೇಗೌಡರ ಆತ್ಮಹತ್ಯೆ ಇದು ರಾಜಕಾರಣದ ಕೊಲೆ ; ಈ ದಿನ ನನಗೆ ಮರೆಯಲಾಗದು : ತೀವ್ರ ಸಂತಾಪ ವ್ಯಕ್ತಪಡಿಸಿ ಕಣ್ಣೀರು ಹಾಕಿದ ಹೆಚ್ ಡಿ ಕೆ -Vishwanews24

ಬೆಂಗಳೂರು, : ವಿಧಾನ ಪರಿಷತ್   ಉಪಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಹೆಚ್ ಡಿ ಕುಮಾರಸ್ವಾಮಿ ”ನನ್ನ ಸ್ನೇಹಿತ ನನ್ನನ್ನು ಅಗಲಿದ್ದಾರೆ, ಈ ದಿನ ನನಗೆ ಮರೆಯಲಾಗದು” ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.

ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ ಕೂಡಾ ಪತ್ತೆಯಾಗಿದ್ದು ಅದರಲ್ಲಿ ಇತ್ತೀಚಿಗೆ ವಿಧಾನ ಪರಿಷತ್‌ನಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ನಡೆದ ಗಲಾಟೆಯ ವೇಳೆ ಧರ್ಮೇಗೌಡ ಅವರನ್ನು ಎಳೆದಾಡಿದ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ.

ಧರ್ಮೇಗೌಡ ಅವರ ನಿಧನಕ್ಕೆ ಸಂಬಂಧಿಸಿ ಬೆಂಗಳೂರಿನ ಜೆ.ಪಿ.ನಗರದಲ್ಲಿ ತಮ್ಮ ನಿವಾಸದ ಹೊರಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹೆಚ್‌ಡಿಕೆ, ”ಧರ್ಮೇಗೌಡ ನನ್ನ ಒಡಹುಟ್ಟಿದ ಸೋದರನಂತೆ. ಅವರ ತಂದೆ ನಾನಂತೂ ಮಂತ್ರಿಯಾಗಿಲ್ಲ, ನಾನು ಬದುಕಿರುವಾಗ ನನ್ನ ಪುತ್ರನಾದರೂ ಮಂತ್ರಿಯಾಗಬೇಕು ಎಂದು ಹೇಳಿದ್ದರು. ಆದರೆ ಅವರು ಮಂತ್ರಿಯಾಗಲಿಲ್ಲ” ಎಂದು ಹೇಳಿದರು.

”ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಹೋದ ಸಂದರ್ಭ ಇವರು ಕೂಡಾ ಕಾಂಗ್ರೆಸ್‌ಗೆ ಹೋಗಲು ತೀರ್ಮಾನಿಸಿದ್ದರು. ಆದರೆ ನಾನು ಹೆಚ್‌ಡಿಕೆ ಬೇಕಾ, ಎಂಎಲ್‌ಎ ಸ್ಥಾನ ಬೇಕಾ ಎಂದು ಕೇಳಿದ್ದೆ. ಆ ಮಾತುಗಳನ್ನು ಕೇಳಿದ ಅವರು, ತಮ್ಮ ತೀರ್ಮಾನ ಬದಲಿಸಿ ಜೆಡಿಎಸ್‌ನಲ್ಲಿಯೇ ಉಳಿದುಕೊಂಡರು” ಎಂದು ಹೇಳಿ ಕಣ್ಣೀರು ಹಾಕಿದರು.

”ವಿಧಾನ ಪರಿಷತ್‌ನಲ್ಲಿ ನಡೆದ ಘಟನೆಯನ್ನು ನೆನೆದು ಧರ್ಮೇಗೌಡರು ಮನ ನೊಂದಿದ್ದರು. ಅದನ್ನೇ ಆಗಾಗ ಹೇಳುತ್ತಿದ್ದರು. ರಾಜಕೀಯ ಸ್ಥಿತಿಗತಿ ಬಗ್ಗೆ ಮಾತನಾಡುತ್ತಿದ್ದರು” ಎಂದು ಹೇಳಿದ ಅವರು, ”ಇದು ರಾಜಕಾರಣದ ಕೊಲೆ” ಎಂದು ಹೆಚ್‌ಡಿಕೆ ಆರೋಪಿಸಿದರು

Vishwa News 24

Recent Posts

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

7 minutes ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

1 hour ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

1 hour ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

1 hour ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

2 hours ago

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ – vishwanews24

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

2 hours ago