ರಾಜ್ಯ ನ್ಯೂಸ್

ಧರ್ಮ ಒಡೆಯಲ್ಲ , ಹೆದರಬೇಡಿ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ

ಬಾಗಲಕೋಟೆ (ಶಿವಯೋಗ ಮಂದಿರ): “”ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದೂ ಧರ್ಮದಿಂದ ಒಡೆಯಲು ಬಿಡುವುದಿಲ್ಲ. ಹೆದರಬೇಡಿ, ಬಿಜೆಪಿ ಧರ್ಮ ಒಡೆಯಲು ಅವಕಾಶ ಕೊಡುವುದಿಲ್ಲ” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಠಾಧಿಪತಿಗಳ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, “ಹಿಂದಿನ ಪ್ರಧಾನಿಗಳು ದೇಗುಲಕ್ಕೆ ಬರಲು ಹಿಂದೇಟು ಹಾಕುತ್ತಿದ್ದರು. ಮೋದಿ ಸರಕಾರ ದೃಷ್ಟಿಕೋನ ಬದಲಿಸುವ ಕೆಲಸ ಮಾಡಿದೆ. ಹೀಗಾಗಿ ಯಾರೂ ಅಂಜಬೇಕಿಲ್ಲ. ವೀರಶೈವ ಲಿಂಗಾಯತ ಒಡೆಯಲು ಬಿಡುವುದಿಲ್ಲ. ನಮ್ಮ ಮೇಲೂ ಜವಾ ಬ್ದಾರಿ ಇದೆ. ನಾನು ರಾಜಕೀಯ ಮಾಡಲು ಇಲ್ಲಿಗೆ ಬಂದಿಲ್ಲ. ಸಂತರ ಆಶೀರ್ವಾದ ಪಡೆಯಲು ಬಂದಿದ್ದೇನೆ’ ಎಂದು ಹೇಳಿದರು.

ಸಭೆಗೂ ಮುನ್ನ, ಪ್ರತ್ಯೇಕ ಧರ್ಮ ಮಾನ್ಯತೆಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ವೀರಶೈವ ಲಿಂಗಾಯತ ಮಠಾಧಿಪತಿಗಳು, ಅಮಿತ್‌ ಶಾ ಅವರಿಗೆ ರಾಜ್ಯ ಸರಕಾರದ ಶಿಫಾರಸು ತಿರಸ್ಕರಿಸುವಂತೆ ಹಕ್ಕೊತ್ತಾಯ ಮಂಡಿಸಿದರು. ಜತೆಗೆ ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸಲು ಮನವಿ ಮಾಡಿಕೊಂಡರು.

ಬಾದಾಮಿ ತಾಲೂಕು ಶಿವಯೋಗ ಮಂದಿರದಲ್ಲಿ ಮಂಗಳವಾರ ರಾಷ್ಟ್ರೀಯ ವೀರಶೈವ ಮಠಾಧೀಶರ ಪರಿಷತ್‌ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ವಿವಿಧ ಜಗದ್ಗುರುಗಳು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಪಂಚಪೀಠಗಳ ಪೈಕಿ ಭಾಗಿಯಾಗಿದ್ದ ಕಾಶೀ ಪೀಠದ ಡಾ|ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲದ ಶ್ರೀ ಚೆನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಶ್ರೀ ಹಾಗೂ ಶಿವಯೋಗ ಮಂದಿರದ ಅಧ್ಯಕ್ಷ ಡಾ| ಸಂಗನಬಸವ ಶ್ರೀಗಳು ಅಮಿತ್‌ ಶಾ ಅವರಿಗೆ ಯಾವುದೇ ಕಾರಣಕ್ಕೂ ಧರ್ಮ ವಿಭಜನೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ತಮ್ಮನ್ನು ತಾವು “ಅಹಿಂದ’ ನಾಯಕ ಎಂದು ಹೇಳಿ ಕೊಳ್ಳುತ್ತಾರೆ. ಆದರೆ, ಅವರಿಗೆ ಕಾಳಜಿ ಇರುವುದು ಅಲ್ಪಸಂಖ್ಯಾಕರ ಬಗ್ಗೆ ಮಾತ್ರ. ಹಿಂದುಳಿದ ವರ್ಗದವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದಿದ್ದಾರೆ ಅಮಿತ್‌ ಶಾ. ಹಾವೇರಿಯ ಕಾಗಿನೆಲೆಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. “”ಯಡಿಯೂರಪ್ಪ ಸರಕಾರ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದವರಿಗೆ ನ್ಯಾಯ, ಗೌರವ ಕೊಡುವ ಕೆಲಸ ಮಾಡುತ್ತದೆ. ಹಿಂದುಳಿದ ವರ್ಗದವರಿಗೆ ಸಂವಿಧಾನಬದ್ಧ ಹಕ್ಕು ತಂದು ಕೊಡುವ ಮಸೂದೆಯನ್ನು ಬಿಜೆಪಿ ಮಂಡಿಸಿದೆ. ಕಾಂಗ್ರೆಸ್‌ ಎಷ್ಟೇ ವಿರೋಧ ಮಾಡಿದರೂ ಹಿಂದುಳಿದ ವರ್ಗದವರಿಗೆ ಅನುಕೂಲವಾಗುವ ಆ ಮಸೂದೆಯನ್ನು ಸಂಸತ್‌ನ ಎರಡೂ ಸದನಗಳಲ್ಲಿ ಪಾಸ್‌ ಮಾಡಿ ಕಾನೂನು ಮಾಡುತ್ತೇವೆ ಎಂದು ಶಾ ಹೇಳಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago