Featured

ಧಾರವಾಡ : ವೈದ್ಯಕೀಯ ಕಾಲೇಜಿನಲ್ಲಿ 77 ಮಂದಿಯಲ್ಲಿಸೋಂಕು ದೃಢ – Vishwanews24

ಧಾರವಾಡ : ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಆರ್ಭಟ ; 77 ಮಂದಿಯಲ್ಲಿಸೋಂಕು ದೃಢ – Vishwanews24

ಧಾರವಾಡ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ 77 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಶುಕ್ರವಾರ ರಾತ್ರಿಯವರೆಗೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಈಗ 77 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ನಿತೀಶ್‌ ಜೆ ಪಾಟೀಲ್‌ ಮಾಹಿತಿ ನೀಡಿದ್ದು, “ಎಲ್ಲರಿಗೂ ಚಿಕಿತ್ಸೆ ಔಷಧೋಪಚಾರ ನಡೆಯುತ್ತಿದೆ. ಸೋಂಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರನ್ನು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. 1,822 ಮಂದಿಯ ತಪಾಸಣೆ ವರದಿ ಇನ್ನು ಬರಬೇಕಿದೆ” ಎಂದಿದ್ದಾರೆ.

“ವರದಿಯಾಗಿರುವ 281 ಪ್ರಕರಣಗಳ ಪೈಕಿ ಆರು ಮಂದಿಯಲ್ಲಿ ಮಾತ್ರವೇ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಮಂದಿಯಲ್ಲಿ ರೋಗದ ಲಕ್ಷಣಗಳಿಲ್ಲ. ಯಾವುದೇ ಸಾವು ಸಂಭವಿಸಿಲ್ಲ” ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆ ಭಾನುವಾರದ ತನಕ ಎಸ್‍ಡಿಎಂ ಹೊರರೋಗಿಗಳ ವಿಭಾಗದ ಸೇವೆ ಸ್ಥಗಿತಗೊಳಿಸಲಾಗಿದೆ. ತುರ್ತು ಚಿಕಿತ್ಸಾ ಸೇವೆ ಮುಂದುವರೆಯಲಿದ್ದು, ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.

“ಕೊರೊನಾ ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಎಸ್‌ಡಿಎಂ ಆಡಳಿತ ಮಂಡಳಿಯು ಕೂಡಲೇ ಸ್ಪಷ್ಟ ಕ್ರಿಯಾಯೋಜನೆ ರೂಪಿಸಿಕೊಂಡು ಆಸ್ಪತ್ರೆ ಆವರಣಕ್ಕೆ ಆಯ್ದ ಕೆಲವು ವೈದ್ಯರು ಹಾಗೂ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು” ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ರವಿಕುಮಾರ ಸುರಪುರ ಹೇಳಿದ್ದಾರೆ.

ಎಸ್‌ಡಿಎಂ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಕಾಲೇಜಿನ ಸುತ್ತಲಿನ 500 ಮೀ. ವ್ಯಾಪ್ತಿಯ ಶಾಲೆ ಕಾಲೇಜುಗಳಿಗೆ ಭಾನುವಾರದವರೆಗೆ ರಜೆ ಘೋಷಿಸಲಾಗಿದೆ

Vishwa News 24

Recent Posts

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

24 minutes ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

2 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

3 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

3 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

3 hours ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

3 hours ago