Featured

ಧಾರವಾಡ : ವೈದ್ಯಕೀಯ ಕಾಲೇಜಿನಲ್ಲಿ 77 ಮಂದಿಯಲ್ಲಿಸೋಂಕು ದೃಢ – Vishwanews24

ಧಾರವಾಡ : ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಆರ್ಭಟ ; 77 ಮಂದಿಯಲ್ಲಿಸೋಂಕು ದೃಢ – Vishwanews24

ಧಾರವಾಡ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ 77 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಶುಕ್ರವಾರ ರಾತ್ರಿಯವರೆಗೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಈಗ 77 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ನಿತೀಶ್‌ ಜೆ ಪಾಟೀಲ್‌ ಮಾಹಿತಿ ನೀಡಿದ್ದು, “ಎಲ್ಲರಿಗೂ ಚಿಕಿತ್ಸೆ ಔಷಧೋಪಚಾರ ನಡೆಯುತ್ತಿದೆ. ಸೋಂಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರನ್ನು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. 1,822 ಮಂದಿಯ ತಪಾಸಣೆ ವರದಿ ಇನ್ನು ಬರಬೇಕಿದೆ” ಎಂದಿದ್ದಾರೆ.

“ವರದಿಯಾಗಿರುವ 281 ಪ್ರಕರಣಗಳ ಪೈಕಿ ಆರು ಮಂದಿಯಲ್ಲಿ ಮಾತ್ರವೇ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಮಂದಿಯಲ್ಲಿ ರೋಗದ ಲಕ್ಷಣಗಳಿಲ್ಲ. ಯಾವುದೇ ಸಾವು ಸಂಭವಿಸಿಲ್ಲ” ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆ ಭಾನುವಾರದ ತನಕ ಎಸ್‍ಡಿಎಂ ಹೊರರೋಗಿಗಳ ವಿಭಾಗದ ಸೇವೆ ಸ್ಥಗಿತಗೊಳಿಸಲಾಗಿದೆ. ತುರ್ತು ಚಿಕಿತ್ಸಾ ಸೇವೆ ಮುಂದುವರೆಯಲಿದ್ದು, ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.

“ಕೊರೊನಾ ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಎಸ್‌ಡಿಎಂ ಆಡಳಿತ ಮಂಡಳಿಯು ಕೂಡಲೇ ಸ್ಪಷ್ಟ ಕ್ರಿಯಾಯೋಜನೆ ರೂಪಿಸಿಕೊಂಡು ಆಸ್ಪತ್ರೆ ಆವರಣಕ್ಕೆ ಆಯ್ದ ಕೆಲವು ವೈದ್ಯರು ಹಾಗೂ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು” ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ರವಿಕುಮಾರ ಸುರಪುರ ಹೇಳಿದ್ದಾರೆ.

ಎಸ್‌ಡಿಎಂ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಕಾಲೇಜಿನ ಸುತ್ತಲಿನ 500 ಮೀ. ವ್ಯಾಪ್ತಿಯ ಶಾಲೆ ಕಾಲೇಜುಗಳಿಗೆ ಭಾನುವಾರದವರೆಗೆ ರಜೆ ಘೋಷಿಸಲಾಗಿದೆ

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

20 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

22 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

22 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

22 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

22 hours ago