ಮಂಗಳೂರು : ನಾನು ಕುಂಭ ಮೇಳಕ್ಕೆ ಹೋಗದಿರುವುದು ನನ್ನ ನಂಬಿಕೆಯ ವಿಚಾರ. ನಾನು ಧರ್ಮ ವಿರೋಧಿಯಲ್ಲ. ಆದರೆ ನನ್ನ ನಂಬಿಕೆಯನ್ನು ಎಐ ತಂತ್ರಜ್ಞಾನ ಬಳಸಿಕೊಂಡು ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ ಎಂದು ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕುಂಭ ಮೇಳಕ್ಕೆ ಹೋಗುವುದು ಅವರವರ ನಂಬಿಕೆ. ಆದರೆ ನಾನು ಹೋಗದ್ದನ್ನೇ ವಿಚಾರವಾಗಿಸಿ, ಒಬ್ಬ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಆತನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಎಐ ನಂತಹ ತಂತ್ರಜ್ಞಾನವನ್ನು ದುರ್ಬಳಕೆ ಮಾಡುವುದು ಅಕ್ಷಮ್ಯ ಅಪರಾಧ. ಈ ರೀತಿ ತಪ್ಪು ಕಲ್ಪನೆ ಹರಡುವ ಕೆಲಸವನ್ನು ಪ್ರಶಾಂತ್ ಸಂಬರ್ಗಿಅಂಥವರು ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸುವುದಕ್ಕಾಗಿ ಕೇಸ್ ದಾಖಲಿಸಲಾಗಿದೆ ಎಂದವರು ಹೇಳಿದರು.
ವಿಜ್ಞಾನ ಅಥವಾ ತಂತ್ರಜ್ಞಾನವನ್ನು ವಿಕಾಸಕ್ಕಾಗಿ ಉಪಯೋಗಿಸಬೇಕೇ ಹೊರತು, ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ ಎಂದು ಪ್ರಕಾಶ್ ರಾಜ್ ಹೇಳಿದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…