ಧಾರ್ಮಿಕ ಜಾತ್ರೆ, ಸಮಾರಂಭ ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು : ಸಚಿವ ಸುಧಾಕರ್ -Vishwanews24
ಧಾರ್ಮಿಕ ಜಾತ್ರೆ, ಸಮಾರಂಭ ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು : ಸಚಿವ ಸುಧಾಕರ್ -Vishwanews24
ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಧಾರ್ಮಿಕ ಜಾತ್ರೆ, ಸಮಾರಂಭ, ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟವಾಗಲಿದೆ ಎಂದು ಅರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಪೂಜ್ಯ ಮಠಮಾನ್ಯಗಳವರು, ದೇವಸ್ಥಾನದ ಪ್ರಮುಖರು ತಮ್ಮ ಸಮುದಾಯಕ್ಕೆ ಸಂದೇಶ ನೀಡಬೇಕು. ಜಾತ್ರೆ, ಸಮಾರಂಭಗಳಿಗೆ ಬರದಂತೆ ಮನವಿ ಮಾಡಬೇಕು. ಚಲಚಿತ್ರ ನಟರೂ ಸಿನಿಮಾ ಪ್ರಚಾರಕ್ಕಾಗಿ ಸಾವಿರಾರು ಜನರನ್ನು ಸೇರಿಸಿರೋದನ್ನು ಗಮನಿಸಿದ್ದೇನೆ. ಸ್ಟಾರ್ ನಟರಿಗೂ ಜವಾಬ್ದಾರಿ ಇದೆ. ನೀವು ಮಾಸ್ಕ್ ಧರಿಸಿ, ನಿಮ್ಮ ಅಭಿಮಾನಿಗಳಿಗೂ ಹೇಳಿ ಎಂದು ಸಿನಿಮಾ ತಾರೆಯರಿಗೆ ಸುಧಾಕರ್ ಮನವಿ ಮಾಡಿದ್ದಾರೆ.
ಏ.30 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ರದ್ದತಿ ವಿಸ್ತರಣೆ -Vishwanews24
