ಮುಂಬೈ : ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ.
ನಟ ರಣಬೀರ್ ಕಪೂರ್, ನಟಿ ಆಲಿಯಾ ಭಟ್ ಹಾಗೂ ಅವರ ಕುಟುಂಬದ ಸದಸ್ಯರು ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬಳಿಕ ನಟ ಹಾಗೂ ಆತನ ಕುಂಟುಬಸ್ಥರ ವಿರುದ್ಧ ದೂರು ದಾಖಲಾಗಿದೆ.
ಸಂಜಯ್ ತಿವಾರಿ ಎಂಬುವವರು ನಟ ಹಾಗೂ ಆತನ ಕುಟುಂಬಸ್ಥರ ವಿರುದ್ಧ ತಮ್ಮ ವಕೀಲರಾದ ಆಶಿಶ್ ರಾಯ್ ಹಾಗೂ ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋದಲ್ಲಿ ಮದ್ಯ ಸುರಿದ ಕೇಕ್ ಮೇಲೆ ಬೆಂಕಿ ಹಚ್ಚಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೇಕ್ ಮೇಲೆ ಮದ್ಯ ಸುರಿದಿದ್ದು ನಟ ರಣಬೀರ್ ಕಪೂರ್ ಅವರು ಬೆಂಕಿ ಹಚ್ಚಿ ಬಳಿಕ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ. ಹಿಂದೂ ಧರ್ಮದಲ್ಲಿ ಇತರ ದೇವತೆಗಳನ್ನು ಆವಾಹನೆ ಮಾಡುವ ಮುನ್ನ ಅಗ್ನಿ ದೇವರನ್ನು ಆವಾಹನೆ ಮಾಡುವ ಸಂಪ್ರದಾಯವಿದೆ. ಆದರೆ ನಟ ಹಾಗೂ ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಣೆ ಮಾಡುವಾಗ ಉದ್ದೇಶಪೂರ್ವಕವಾಗಿ ಮದ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಹೇಳಿದ್ದಾರೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ದೂರು ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…