ಮಂಗಳೂರು: ಹಿಜಾಬ್ ಮುಸ್ಲಿಮ್ ಸ್ತ್ರೀಯರ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕು, ಧಾರ್ಮಿಕವಾದ ಸರ್ವ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಿದ್ದೇವೆ.
ಈ ಹಕ್ಕುಗಳ ಜೊತೆಗೆ ಸಾರ್ವತ್ರಿಕ ಶಿಕ್ಷಣ ಮತ್ತು ದೇಶಪ್ರೇಮವನ್ನು ನಾವು ಚೆನ್ನಾಗಿಯೇ ಬಲ್ಲೆವು. ಧಾರ್ಮಿಕ ಸಂಪ್ರದಾಯದ ರಕ್ಷಣೆ, ಶಿಕ್ಷಣ ಮತ್ತು ದೇಶ ಪ್ರೇಮ ನಮ್ಮ ರಕ್ತದಲ್ಲಿದೆ.
ಇದರ ಪಾಠವನ್ನು ನಮಗೆ ಒಂದು ರಾಜಕೀಯ ಪಕ್ಷದ ವಕ್ತಾರೆ ಎಂದು ಅಹಂಕಾರದಿಂದ ಬೀಗುತ್ತಾ ಬಾಯಿಗೆ ಬಂದಂತೆ ಮಾತಾಡುತ್ತಿರುವ ಸುರಯ್ಯಾ ಅಂಜುಮ್ ನಿಂದ ಕಲಿತು ಕೊಳ್ಳುವ ಅಗತ್ಯವಿಲ್ಲ. ಕಾರಣ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಏನೇನೂ ತಿಳಿಯದ ಸುರಯ್ಯ ಅಂಜುಮ್ ತಾನು ಒಮ್ಮಿಂದೊಮ್ಮೆಲೆ ಪ್ರಚಾರಕ್ಕೆ ಬರಬೇಕು ಎಂಬ ನೆಲೆಯಲ್ಲಿ ಬೊಗಳುತಿದ್ದಾರೆ.
ಅದಕ್ಕಾಗಿ ಇನ್ನೂ ಸುಲಭದ ಮಾರ್ಗ ತಾನು ಪ್ರತಿನಿಧಿಸುವ ಪಕ್ಷದಿಂದ ಹಿಜಾಬ್ ಅನ್ನು ವಿರೋಧಿಸುವ ರಾಷ್ಟ್ರೀಯ ಪಕ್ಷಕ್ಕೆ ಪಕ್ಷಾಂತರ ಗೊಂಡರೆ ಇನ್ನೂ ಹೆಚ್ಚಿನ ಪ್ರಚಾರ ಗಿಟ್ಟಿಸ ಬಹುದು. ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಒಂದು ನಿರ್ಧಿಷ್ಟ ಧರ್ಮದ ಮಹಿಳೆಯರ ಸಾಂವಿಧಾನಿಕ ಹಕ್ಕನ್ನು ಹೀಯಾಳಿಸಿದರೆ ಮತ್ತು ತೆಗಳಿದರೆ ಸಾಮೂಹಿಕ ಬಹಿಷ್ಕಾರಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚು ಎಂದು ಸುರಯ್ಯ ಅಂಜುಮ್ ಅರ್ಥ ಮಾಡಿಕೊಂಡು ಇತರರಿಗೆ ಭೋಧನೆ ಮಾಡುವುದು ಒಳಿತು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…