ಮಂಗಳೂರು: ಹಿಜಾಬ್ ಮುಸ್ಲಿಮ್ ಸ್ತ್ರೀಯರ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕು, ಧಾರ್ಮಿಕವಾದ ಸರ್ವ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಿದ್ದೇವೆ.
ಈ ಹಕ್ಕುಗಳ ಜೊತೆಗೆ ಸಾರ್ವತ್ರಿಕ ಶಿಕ್ಷಣ ಮತ್ತು ದೇಶಪ್ರೇಮವನ್ನು ನಾವು ಚೆನ್ನಾಗಿಯೇ ಬಲ್ಲೆವು. ಧಾರ್ಮಿಕ ಸಂಪ್ರದಾಯದ ರಕ್ಷಣೆ, ಶಿಕ್ಷಣ ಮತ್ತು ದೇಶ ಪ್ರೇಮ ನಮ್ಮ ರಕ್ತದಲ್ಲಿದೆ.
ಇದರ ಪಾಠವನ್ನು ನಮಗೆ ಒಂದು ರಾಜಕೀಯ ಪಕ್ಷದ ವಕ್ತಾರೆ ಎಂದು ಅಹಂಕಾರದಿಂದ ಬೀಗುತ್ತಾ ಬಾಯಿಗೆ ಬಂದಂತೆ ಮಾತಾಡುತ್ತಿರುವ ಸುರಯ್ಯಾ ಅಂಜುಮ್ ನಿಂದ ಕಲಿತು ಕೊಳ್ಳುವ ಅಗತ್ಯವಿಲ್ಲ. ಕಾರಣ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಏನೇನೂ ತಿಳಿಯದ ಸುರಯ್ಯ ಅಂಜುಮ್ ತಾನು ಒಮ್ಮಿಂದೊಮ್ಮೆಲೆ ಪ್ರಚಾರಕ್ಕೆ ಬರಬೇಕು ಎಂಬ ನೆಲೆಯಲ್ಲಿ ಬೊಗಳುತಿದ್ದಾರೆ.
ಅದಕ್ಕಾಗಿ ಇನ್ನೂ ಸುಲಭದ ಮಾರ್ಗ ತಾನು ಪ್ರತಿನಿಧಿಸುವ ಪಕ್ಷದಿಂದ ಹಿಜಾಬ್ ಅನ್ನು ವಿರೋಧಿಸುವ ರಾಷ್ಟ್ರೀಯ ಪಕ್ಷಕ್ಕೆ ಪಕ್ಷಾಂತರ ಗೊಂಡರೆ ಇನ್ನೂ ಹೆಚ್ಚಿನ ಪ್ರಚಾರ ಗಿಟ್ಟಿಸ ಬಹುದು. ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಒಂದು ನಿರ್ಧಿಷ್ಟ ಧರ್ಮದ ಮಹಿಳೆಯರ ಸಾಂವಿಧಾನಿಕ ಹಕ್ಕನ್ನು ಹೀಯಾಳಿಸಿದರೆ ಮತ್ತು ತೆಗಳಿದರೆ ಸಾಮೂಹಿಕ ಬಹಿಷ್ಕಾರಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚು ಎಂದು ಸುರಯ್ಯ ಅಂಜುಮ್ ಅರ್ಥ ಮಾಡಿಕೊಂಡು ಇತರರಿಗೆ ಭೋಧನೆ ಮಾಡುವುದು ಒಳಿತು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…