ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಂಬರುವ ಬೈ ಎಲೆಕ್ಷನ್ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.
ಹಾಗೆಯೇ ಪದೇ ಪದೇ ಆಪರೇಷನ್ ಕಮಲದ ಕುರಿತು ಪ್ರಿಯಾಂಕ್ ಅವರು ಮಾತನಾಡುವುದು ಸರಿಯಲ್ಲ. ನಾನು 50 ಲಕ್ಷ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಅವರ ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ. ನಾನು ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ಉನ್ನತ ತನಿಖೆಗೂ ನಾನು ಸಿದ್ಧ. ಸುಮ್ಮನೆ ಸುಳ್ಳು ಆರೋಪ ಮಾಡೋದು ಪ್ರಿಯಾಂಕ್ ಅವರಿಗೆ ಶೋಭೆತರಲ್ಲ. ಸುಳ್ಳು ಹೇಳಿ ಸಣ್ಣತನ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…