ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಂಬರುವ ಬೈ ಎಲೆಕ್ಷನ್ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.
ಹಾಗೆಯೇ ಪದೇ ಪದೇ ಆಪರೇಷನ್ ಕಮಲದ ಕುರಿತು ಪ್ರಿಯಾಂಕ್ ಅವರು ಮಾತನಾಡುವುದು ಸರಿಯಲ್ಲ. ನಾನು 50 ಲಕ್ಷ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಅವರ ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ. ನಾನು ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ಉನ್ನತ ತನಿಖೆಗೂ ನಾನು ಸಿದ್ಧ. ಸುಮ್ಮನೆ ಸುಳ್ಳು ಆರೋಪ ಮಾಡೋದು ಪ್ರಿಯಾಂಕ್ ಅವರಿಗೆ ಶೋಭೆತರಲ್ಲ. ಸುಳ್ಳು ಹೇಳಿ ಸಣ್ಣತನ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…