Featured

‘ಧೈರ್ಯವಿದ್ದರೆ ರಾಹುಲ್​​ ನನ್ನನ್ನು ತಬ್ಬಿಕೊಳ್ಳಲಿ’: ಯೋಗಿ ಆದಿತ್ಯನಾಥ್​​

ನವದೆಹಲಿ: ರಾಹುಲ್​ ಗಾಂಧಿಗೆ ಧೈರ್ಯ ಇದ್ದರೆ ಪಾರ್ಲಿಮೆಂಟ್​​ನಲ್ಲಿ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ಟಂಟ್​​ ಮಾಡಿದ ರೀತಿ ನನ್ನನ್ನು ತಬ್ಬಿಕೊಳ್ಳಲಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿಗೆ ಸವಾಲು ಹಾಕಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯನ್ನು ತಬ್ಬಿಕೊಳ್ಳುವುದಕ್ಕೂ ಮೊದಲು ರಾಹುಲ್​ ಗಾಂಧಿ ಕಡಿಮೆ ಅಂದ್ರೂ 10 ಬಾರಿ ಪ್ರಾಕ್ಟೀಸ್​​ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್​ ಗಾಂಧಿ ಸ್ವಲ್ಪವಾದ್ರೂ ತಿಳುವಳಿಕೆ ಇರುವಂತಹ ವ್ಯಕ್ತಿಯಾಗಿದ್ರೆ ಪಾರ್ಲಿಮೆಂಟ್​ನಲ್ಲಿ ಆ ರೀತಿ ನಡೆದುಕೊಳ್ಳುತ್ತಿರಲಿಲ್ಲ. ಈ ರೀತಿಯ ರಾಜಕೀಯ ಸ್ಟಂಟ್​ಗಳನ್ನು ನಾನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಯೋಗಿ ಹೇಳಿದ್ದಾರೆ.

ಇನ್ನು ಪಾರ್ಲಿಮೆಂಟ್​​ನಲ್ಲಿ ಮೋದಿಯನ್ನು ತಬ್ಬಿಕೊಂಡಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್​ ಗಾಂಧಿ, ಇತ್ತೀಚೆಗೆ ನಾನು ಬಿಜೆಪಿ ಸಂಸದರ ಮುಂದೆ ಹೋದಾಗಲೆಲ್ಲಾ ನಾನು ಅವರನ್ನು ತಬ್ಬಿಕೊಳ್ತೇನೆ ಅಂತಾ ಯೋಚಿಸಿ ಎರಡು ಹೆಜ್ಜೆ ಹಿಂದೆ ಸರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಿಮ್ಮ ಬುದ್ಧಿಶಕ್ತಿ ಉಪಯೋಗಿಸಿ ಯಾರೊಂದಿಗಾದ್ರೂ ಹೊಡೆದಾಡಬಹುದು. ಆದ್ರೆ ಎಲ್ಲರೂ ಆಯ್ದುಕೊಳ್ಳೋದು ದ್ವೇಷದ ಮಾರ್ಗವನ್ನು ಮಾತ್ರ. ಧರ್ಮ ನಮಗೆ ಹೇಳಿಕೊಟ್ಟಿರುವ ಮುಖ್ಯ ಪಾಠವೆಂದರೆ ದ್ವೇಷಿಸುವರಿಂದ ನೀವೂ ಎಂದಿಗೂ ಉತ್ತಮ ಅಭಿಪ್ರಾಯ ಪಡೆಯಲಾಗುವುದಿಲ್ಲ. ಬಿಜೆಪಿ ಮತ್ತು ಪ್ರಧಾನಿ ಕೂಡ ನಮ್ಮನ್ನು ದ್ವೇಷಿಸುತ್ತಾರೆ. ಹಾಗೆಂದು ನಾವು ಅವರನ್ನು ದ್ವೇಷಿಸುವುದಿಲ್ಲ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

6 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

9 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

10 hours ago