ಉಡುಪಿ : ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಸೆಲ್ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ ಬರೆದಿದೆ.
ಮುಂಜಾನೆ 3:00ಗಂಟೆ ಸುಮಾರಿಗೆ ಮೆರವಣಿಗೆಯ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿಯವರ ಕೈಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಆರೆಸ್ಸೆಸ್ ಧ್ವಜ (ಭಗವಾನ್ಧ್ವಜ) ಹಸ್ತಾಂತರಿಸಿದ್ದು, ಅವರು ಈ ಧ್ವಜವನ್ನು ಕೈಯಲ್ಲಿ ಹಿಡಿದು ಮೇಲಕ್ಕೆ ಎತ್ತಿ ಪ್ರದರ್ಶಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ್ದರು ಎಂದು ಕಾಂಗ್ರೆಸ್ ಕಾನೂನು ಸೆಲ್ನ ಅಧ್ಯಕ್ಷ ಹರೀಶ್ ಶೆಟ್ಟಿ ಜ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದ ಪ್ರತಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯ ಕಾರ್ಯದರ್ಶಿ ಅವರಿಗೂ ಕಳುಹಿಸಲಾಗಿದೆ.
ಜಿಲ್ಲಾಧಿಕಾರಿಯವರ ಈ ನಡೆ ಸರಕಾರಿ ಸೇವಾ ನಿಯಮಗಳು ಹಾಗೂ ಸಂವಿಧಾನದ ಧರ್ಮ ನಿರಪೇಕ್ಷತೆಯ ತತ್ವಗಳಿಗೆ ವಿರುದ್ಧವಾಗಿದ್ದು, ಈ ರೀತಿಯ ನಡೆ ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಹೇಳಿದ್ದಾರೆ.
ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಹರೀಶ್ ಶೆಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…