ಧ್ವನಿವರ್ಧಕ ಬಳಸಲು ಅನುಮತಿ ಕಡ್ಡಾಯ – Vishwnaews24

Featured, ರಾಜ್ಯ ನ್ಯೂಸ್

ಮೈಕ್​ ಅಬ್ಬರಕ್ಕೆ ಬ್ರೇಕ್​ ಹಾಕಿದ ಸರ್ಕಾರ: ಧ್ವನಿವರ್ಧಕ ಬಳಸಲು ಅನುಮತಿ ಕಡ್ಡಾಯ

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ.

ಸುಪ್ರೀಂಕೋರ್ಟ್‌ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್‌ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.

ಆಜಾನ್​ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್‌ ಚಾಲೀಸಾ ಮೊಳಗಿದೆ. ಆಜಾನ್​ ವರ್ಸಸ್​ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.

ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಮೂರೂ ವರ್ಷದಲ್ಲಿ ನನಗೆ ಹಿತಕರವಾಗದ ಹಾಗೆ ಉಸಿರುಗಟ್ಟಿಸುವ ವಾತಾವರಣವಿತ್ತು : ಪ್ರಮೋದ್ ಮಧ್ವರಾಜ್ – Vishwanews24

 

Leave a Reply