ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ.
ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.
ಆಜಾನ್ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್ ಚಾಲೀಸಾ ಮೊಳಗಿದೆ. ಆಜಾನ್ ವರ್ಸಸ್ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…