ಪಡುಬಿದ್ರಿ : ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಹೊರಸೂಸುವ ದುರ್ವಾಸನೆಯಿಂದ ಪರಿಸರ ಮಾಲಿನ್ಯ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರು ತ್ತಿರುವ ಹಿನ್ನೆಲೆಯಲ್ಲಿ ಜುಲೈ 30ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ಪ್ರತಿಭಟನೆಗೂ ಮೊದಲು ಪಲಿಮಾರು ಗ್ರಾಮ ಪಂಚಾಯಿತಿಗೆ ವಿಶೇಷ ಗ್ರಾಮಸಭೆ ಕರೆದು ಕಂಪೆನಿ ವಿರುದ್ಧ ನಿರ್ಣಯ ಕೈಗೊಳ್ಳುವ ಬಗ್ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಅದರೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿಯಾದ ಪಲಿಮಾರು, ಪಡುಬಿದ್ರಿ, ಎಲ್ಲೂರು, ಇನ್ನಾ, ಹೆಜಮಾಡಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಗ್ರಾಮಸಭೆ ಕರೆದು ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ಕಂಪೆನಿ ಎದುರು ಪ್ರತಿಭಟನೆ ನಡೆಸಲು ನಿರ್ಣಯಿಸಲಾಯಿತು.
ಕಾನೂನು ಹೋರಾಟದ ಬಗ್ಗೆ ಊರಿನ ಹಿರಿಯರು, ಅನುಭವಿಗಳು, ವಕೀಲರನ್ನು ಒಳಗೊಂಡಂತೆ ಸಮಿತಿ ರಚಿಸುವುದು ಮತ್ತು ಸರಕಾರದ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಒತ್ತಡ ಹೇರುವ ಬಗ್ಗೆಯೂ ತೀರ್ಮಾನಿಸಲಾಯಿತು.
ಈ ಸಂದರ್ಭ ದಿನೇಶ್ ಪಲಿಮಾರ್, ನಂದಿಕೂರು ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧ್ವರಾಯ ಭಟ್, ಪ್ರೇಮಾನಂದ ಕಲ್ಮಾಡಿ, ನವೀನ್ ಚಂದ್ರಶೆಟ್ಟಿ, ನವೀನ್ ಚಂದ್ರ ಸುವರ್ಣ, ಗಾಯತ್ರಿ ಪ್ರಭು, ಸಂದೀಪ್ ಪಲಿಮಾರ್, ಲಕ್ಷ್ಮಣ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸುಧೀರ್ ಕರ್ಕೇರ, ನಾಗೇಶ್ ರಾವ್, ಜಿತೇಂದ್ರ ಶೆಟ್ಟಿ, ಮಧುಕರ ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶ್ರೀನಿವಾಸ ಶರ್ಮ, ರವೀಂದ್ರ ಪ್ರಭು, ಸತೀಶ್ ಗುಡ್ಡೆಚ್ಚಿ, ಚಂದ್ರಹಾಸ್ ಶೆಟ್ಟಿ, ಅಮರನಾಥ್ ಶೆಟ್ಟಿ, ದೀಪಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…