ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ ಡಿಕೆಶಿ – Vishwanews24
ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು : ಡಿ.ಕೆ ಶಿ
ಹಾಸನ: ಗುಜರಾತ್ ಮೂಲದ ಹಾಲು ಸಹಕಾರಿ ಸಂಘ ಅಮುಲ್, ಬೆಂಗಳೂರಿನ ಹಾಲು ಮಾರುಕಟ್ಟೆ ಪ್ರವೇಶಿಸಲು ನಿರ್ಧರಿಸಿರುವುದಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು.
ಸೋಮವಾರ ಹಾಸನದ ಹಾಸನದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲು ಮತ್ತು ಉತ್ಪನ್ನಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹಾಲಿನ ಉತ್ಪನ್ನಗಳನ್ನು ಖರೀದಿಸಿದರು.
ಹಾಸನದ ನಂದಿನಿ ಮಳಿಗೆಗೆ ಇಂದು ಭೇಟಿ ನೀಡಿ ಹಾಲಿನ ಉತ್ಪನ್ನಗಳನ್ನು ಖರೀದಿಸಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ. pic.twitter.com/k6qs0SGlUs
— DK Shivakumar (@DKShivakumar) April 10, 2023
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಲಿನ ಉತ್ಪನ್ನಗಳಾದ ಮೈಸೂರು ಪಾಕ್, ಪೆಡಾ, ಬಿಸ್ಕೆಟ್, ಚಾಕಲೇಟ್ನ್ನು ಪಕ್ಷದ ಅಧ್ಯಕ್ಷನಾಗಿ ಖರೀದಿ ಮಾಡಿದ್ದೇನೆ. ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
ಇಂದು ಸಂಜೆ 170 ರಿಂದ180 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್ ಯಡಿಯೂರಪ್ಪ – Vishwanews24
”ಹಾಸನದ ನಂದಿನಿ ಮಳಿಗೆಗೆ ಇಂದು ಭೇಟಿ ನೀಡಿ ಹಾಲಿನ ಉತ್ಪನ್ನಗಳನ್ನು ಖರೀದಿಸಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
