ಹಾಸನ: ಗುಜರಾತ್ ಮೂಲದ ಹಾಲು ಸಹಕಾರಿ ಸಂಘ ಅಮುಲ್, ಬೆಂಗಳೂರಿನ ಹಾಲು ಮಾರುಕಟ್ಟೆ ಪ್ರವೇಶಿಸಲು ನಿರ್ಧರಿಸಿರುವುದಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು.
ಸೋಮವಾರ ಹಾಸನದ ಹಾಸನದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲು ಮತ್ತು ಉತ್ಪನ್ನಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹಾಲಿನ ಉತ್ಪನ್ನಗಳನ್ನು ಖರೀದಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಲಿನ ಉತ್ಪನ್ನಗಳಾದ ಮೈಸೂರು ಪಾಕ್, ಪೆಡಾ, ಬಿಸ್ಕೆಟ್, ಚಾಕಲೇಟ್ನ್ನು ಪಕ್ಷದ ಅಧ್ಯಕ್ಷನಾಗಿ ಖರೀದಿ ಮಾಡಿದ್ದೇನೆ. ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
”ಹಾಸನದ ನಂದಿನಿ ಮಳಿಗೆಗೆ ಇಂದು ಭೇಟಿ ನೀಡಿ ಹಾಲಿನ ಉತ್ಪನ್ನಗಳನ್ನು ಖರೀದಿಸಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…