Featured

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯ – vishwanews24

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯ

ಬೆಂಗಳೂರು : ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್‌ಗಳನ್ನು ಪರಿಚಯಿಸಿದೆ.

ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಹತ್ತು ಹೊಸ ನಂದಿನಿ ಉತ್ಪನ್ನಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಈ ಪೈಕಿ ರೂ.10 ದರದ ಹಾಲು ಹಾಗೂ ಮೊಸರಿನ ಸಣ್ಣ ಪ್ಯಾಕ್‌ಗಳ ಜೊತೆಗೆ ಮಧ್ಯಮ ಕೊಬ್ಬಿನ ಪನೀರ್, ಹೆಚ್ಚಿನ ಪರಿಮಳಯುಕ್ತ ತುಪ್ಪ, ಪ್ರೋಬಯಾಟಿಕ್ ಮಾವಿನ ಲಸ್ಸಿ, ಡೈರಿ ವೈಟ್‌ನರ್ ಸೇರಿದಂತೆ ಹಲವು ಹೊಸ ಉತ್ಪನ್ನಗಳು ಸೇರಿವೆ. ಇವುಗಳು ನಂದಿನಿ ಮಳಿಗೆಗಳಲ್ಲಿ ಲಭ್ಯವಿರಲಿವೆ.

ಹೊಸ ಬೆಲೆ ನಿಗದಿ ಪ್ರಕಾರ, ನಂದಿನಿ ಹಾಲು 160 ಮಿಲಿಲೀಟರ್ ಪ್ಯಾಕ್‌ನಲ್ಲಿ ರೂ.10ಕ್ಕೆ ಮಾರಾಟವಾಗಲಿದೆ. ಮೊಸರು 140 ಮಿಲಿಲೀಟರ್ ಪ್ಯಾಕ್‌ನಲ್ಲಿ ಇದೇ ದರಕ್ಕೆ ಲಭ್ಯವಾಗುತ್ತದೆ. ಇದುವರೆಗೆ ಹಾಲು ಮತ್ತು ಮೊಸರು 200 ಮಿಲಿಲೀಟರ್ ಪ್ಯಾಕ್‌ಗಳಲ್ಲಿ ಮಾರಾಟವಾಗುತ್ತಿತ್ತು. ಒಬ್ಬರೇ ವಾಸಿಸುವ ಮನೆಗಳಲ್ಲಿ ಅಥವಾ ಕಡಿಮೆ ಬಳಕೆಯ ಕುಟುಂಬಗಳಲ್ಲಿ 200 ಮಿಲಿಲೀಟರ್ ಹಾಲು ಅಥವಾ ಮೊಸರು ಸಂಪೂರ್ಣವಾಗಿ ಬಳಸಲಾಗದೆ ವ್ಯರ್ಥವಾಗುವ ಸಾಧ್ಯತೆ ಹೆಚ್ಚಾಗಿತ್ತು. ಉಳಿದ ಹಾಲು ಅಥವಾ ಮೊಸರನ್ನು ಸಂಗ್ರಹಿಸುವುದು ಗ್ರಾಹಕರಿಗೆ ಕಷ್ಟಕರವಾಗುತ್ತಿತ್ತು. ಈ ಹಿನ್ನೆಲೆ, ಕಡಿಮೆ ಬೆಲೆಯಲ್ಲಿ ಸಣ್ಣ ಪ್ರಮಾಣದ ಪ್ಯಾಕ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರು ದೈನಂದಿನ ಬಳಕೆಗೆ ತಕ್ಕಷ್ಟು ತಾಜಾ ಹಾಲು ಅಥವಾ ಮೊಸರನ್ನು ಖರೀದಿಸಬಹುದಾಗಿದೆ. ಇದರಿಂದ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಗ್ರಾಹಕರಿಗೆ ಹೆಚ್ಚಿನ ಅನುಕೂಲವೂ ದೊರೆಯಲಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago