ಬೆಂಗಳೂರು : ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್ಗಳನ್ನು ಪರಿಚಯಿಸಿದೆ.
ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಹತ್ತು ಹೊಸ ನಂದಿನಿ ಉತ್ಪನ್ನಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಈ ಪೈಕಿ ರೂ.10 ದರದ ಹಾಲು ಹಾಗೂ ಮೊಸರಿನ ಸಣ್ಣ ಪ್ಯಾಕ್ಗಳ ಜೊತೆಗೆ ಮಧ್ಯಮ ಕೊಬ್ಬಿನ ಪನೀರ್, ಹೆಚ್ಚಿನ ಪರಿಮಳಯುಕ್ತ ತುಪ್ಪ, ಪ್ರೋಬಯಾಟಿಕ್ ಮಾವಿನ ಲಸ್ಸಿ, ಡೈರಿ ವೈಟ್ನರ್ ಸೇರಿದಂತೆ ಹಲವು ಹೊಸ ಉತ್ಪನ್ನಗಳು ಸೇರಿವೆ. ಇವುಗಳು ನಂದಿನಿ ಮಳಿಗೆಗಳಲ್ಲಿ ಲಭ್ಯವಿರಲಿವೆ.
ಹೊಸ ಬೆಲೆ ನಿಗದಿ ಪ್ರಕಾರ, ನಂದಿನಿ ಹಾಲು 160 ಮಿಲಿಲೀಟರ್ ಪ್ಯಾಕ್ನಲ್ಲಿ ರೂ.10ಕ್ಕೆ ಮಾರಾಟವಾಗಲಿದೆ. ಮೊಸರು 140 ಮಿಲಿಲೀಟರ್ ಪ್ಯಾಕ್ನಲ್ಲಿ ಇದೇ ದರಕ್ಕೆ ಲಭ್ಯವಾಗುತ್ತದೆ. ಇದುವರೆಗೆ ಹಾಲು ಮತ್ತು ಮೊಸರು 200 ಮಿಲಿಲೀಟರ್ ಪ್ಯಾಕ್ಗಳಲ್ಲಿ ಮಾರಾಟವಾಗುತ್ತಿತ್ತು. ಒಬ್ಬರೇ ವಾಸಿಸುವ ಮನೆಗಳಲ್ಲಿ ಅಥವಾ ಕಡಿಮೆ ಬಳಕೆಯ ಕುಟುಂಬಗಳಲ್ಲಿ 200 ಮಿಲಿಲೀಟರ್ ಹಾಲು ಅಥವಾ ಮೊಸರು ಸಂಪೂರ್ಣವಾಗಿ ಬಳಸಲಾಗದೆ ವ್ಯರ್ಥವಾಗುವ ಸಾಧ್ಯತೆ ಹೆಚ್ಚಾಗಿತ್ತು. ಉಳಿದ ಹಾಲು ಅಥವಾ ಮೊಸರನ್ನು ಸಂಗ್ರಹಿಸುವುದು ಗ್ರಾಹಕರಿಗೆ ಕಷ್ಟಕರವಾಗುತ್ತಿತ್ತು. ಈ ಹಿನ್ನೆಲೆ, ಕಡಿಮೆ ಬೆಲೆಯಲ್ಲಿ ಸಣ್ಣ ಪ್ರಮಾಣದ ಪ್ಯಾಕ್ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರು ದೈನಂದಿನ ಬಳಕೆಗೆ ತಕ್ಕಷ್ಟು ತಾಜಾ ಹಾಲು ಅಥವಾ ಮೊಸರನ್ನು ಖರೀದಿಸಬಹುದಾಗಿದೆ. ಇದರಿಂದ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಗ್ರಾಹಕರಿಗೆ ಹೆಚ್ಚಿನ ಅನುಕೂಲವೂ ದೊರೆಯಲಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…