ನವದೆಹಲಿ,:-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ.
ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಭದ್ರತಾ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಪಾಕಿಸ್ತಾನವನ್ನು ಭಾರತ ಅತ್ಯಂತ ನಂಬಿಕಸ್ಥ ರಾಷ್ಟ್ರ ಎಂದು ಪರಿಗಣಿಸಿತ್ತು.
ಭಯೋತ್ಪಾದನ ವಿರುದ್ಧದ ಹೋರಾಟದಲ್ಲಿ ತಾನು ಭಾರತದೊಂದಿಗೆ ಕೈ ಜೋಡಿಸಲಿದ್ದೇನೆ ಎಂದು ಹೇಳಿದ್ದರಿಂದ ನೆರೆರಾಷ್ಟ್ರ ಪಾಕಿಸ್ತಾನ ಹೇಳಿಕೊಂಡಿತ್ತು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪಾಕ್ ಒಂದು ಕಡೆ ಭಯೋತ್ಪಾದನೆ ವಿರುದ್ದ ತಮ್ಮ ಹೋರಾಟ ಎಂದು ಹೇಳುತ್ತಲೇ ಉಗ್ರರಿಗೆ ತನ್ನ ನೆಲದಲ್ಲಿಯೇ ಆಶ್ರಯ ನೀಡಿದೆ.
ನಿನ್ನೆ ಪುಲ್ವಾಮದಲ್ಲಿ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಆತ್ಮಾಹುತಿ ದಳದ ಉಗ್ರನೊಬ್ಬ 100 ಕೆಜಿ ಆರ್ಡಿಎಕ್ಸ್ ತುಂಬಿಕೊಂಡಿದ್ದ ವಾಹನವನ್ನು ಸೇನಾ ವಾಹನಕ್ಕೆ ಡಿಕ್ಕಿ ಹೊಡೆಸಿದ್ದರಿಂದ 37 ಮಂದಿ ಯೋಧರು ಹುತಾತ್ಮರಾಗಿದ್ದಾರೆ.
ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂಬುದು ಮನವರಿಕೆಯಾದ ನಂತರ ಭಾರತ, ನಂಬಿಕೆದ್ರೋಹಿ ಪಾಕಿಸ್ತಾನವನ್ನು ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ತೆಗೆದು ಹಾಕಿದೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…