ನವದೆಹಲಿ,:-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ.
ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಭದ್ರತಾ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಪಾಕಿಸ್ತಾನವನ್ನು ಭಾರತ ಅತ್ಯಂತ ನಂಬಿಕಸ್ಥ ರಾಷ್ಟ್ರ ಎಂದು ಪರಿಗಣಿಸಿತ್ತು.
ಭಯೋತ್ಪಾದನ ವಿರುದ್ಧದ ಹೋರಾಟದಲ್ಲಿ ತಾನು ಭಾರತದೊಂದಿಗೆ ಕೈ ಜೋಡಿಸಲಿದ್ದೇನೆ ಎಂದು ಹೇಳಿದ್ದರಿಂದ ನೆರೆರಾಷ್ಟ್ರ ಪಾಕಿಸ್ತಾನ ಹೇಳಿಕೊಂಡಿತ್ತು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪಾಕ್ ಒಂದು ಕಡೆ ಭಯೋತ್ಪಾದನೆ ವಿರುದ್ದ ತಮ್ಮ ಹೋರಾಟ ಎಂದು ಹೇಳುತ್ತಲೇ ಉಗ್ರರಿಗೆ ತನ್ನ ನೆಲದಲ್ಲಿಯೇ ಆಶ್ರಯ ನೀಡಿದೆ.
ನಿನ್ನೆ ಪುಲ್ವಾಮದಲ್ಲಿ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಆತ್ಮಾಹುತಿ ದಳದ ಉಗ್ರನೊಬ್ಬ 100 ಕೆಜಿ ಆರ್ಡಿಎಕ್ಸ್ ತುಂಬಿಕೊಂಡಿದ್ದ ವಾಹನವನ್ನು ಸೇನಾ ವಾಹನಕ್ಕೆ ಡಿಕ್ಕಿ ಹೊಡೆಸಿದ್ದರಿಂದ 37 ಮಂದಿ ಯೋಧರು ಹುತಾತ್ಮರಾಗಿದ್ದಾರೆ.
ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂಬುದು ಮನವರಿಕೆಯಾದ ನಂತರ ಭಾರತ, ನಂಬಿಕೆದ್ರೋಹಿ ಪಾಕಿಸ್ತಾನವನ್ನು ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ತೆಗೆದು ಹಾಕಿದೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…