ಜಬಲ್ಪುರ: ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ನಡೆದಿದೆ.
ಶಿಲ್ಪಾ ಝರಿಯಾ ಕೊಲೆಯಾದಾಕೆ. ಆಕೆಯನ್ನು ಹತ್ಯೆಗೈದ ಅಭಿಜಿತ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ವಾರದ ಹಿಂದೆ ನಡೆದಿದೆ ಎನ್ನಲಾಗಿದ್ದು, ಆರೋಪಿಯು ಜಬಲ್ಪುರದ ಮೇಖ್ಲಾ ರೆಸಾರ್ಟ್ನಲ್ಲಿ ಯುವತಿ ಶಿಲ್ಪಾಳ ಕತ್ತು ಸೀಳಿ ಹಾಸಿಗೆ ಮೇಲೆ ಇರುವ ಮೃತದೇಹವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ನಂಬಿಕೆ ದ್ರೋಹ ಮಾಡಿದರೆ ಇದೇ ರೀತಿ ಆಗುತ್ತದೆ ಎಂಬುದಾಗಿ ವೀಡಿಯೋದಲ್ಲಿ ಹೇಳಿದ್ದು, ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ತೋರಿಸಿದ್ದಾನೆ.
ಯುಕೆಯಲ್ಲಿ ಕೆಲಸ ಮಾಡಲು ಭಾರತೀಯರಿಗೆ 3,000 ವೀಸಾ ನೀಡಲು ಒಪ್ಪಿದ ಪ್ರಧಾನಿ ʻರಿಷಿ ಸುನಕ್ʼ – Vishwanews24
ಅಭಿಜಿತ್ನ ಗೆಳೆಯ, ಪಾಟ್ನಾದಲ್ಲಿ ವ್ಯಾಪಾರಿಯಾಗಿರುವ ಜಿತೇಂದ್ರ ಎಂಬಾತನೊಂದಿಗೆ ಶಿಲ್ಪಾ ಸಂಬಂಧ ಹೊಂದಿದ್ದಳು. ಅಲ್ಲದೆ ಆತನಿಂದ 12 ಲಕ್ಷ ರೂ. ಪಡೆದುಕೊಂಡು ಜಬಲ್ಪುರಕ್ಕೆ ಬಂದಿದ್ದಳು. ಈ ಬಗ್ಗೆ ಜಿತೇಂದ್ರನಿಂದ ತಿಳಿದುಕೊಂಡ ಅಭಿಜಿತ್ ಸೀದಾ ಜಬಲ್ಪುರಕ್ಕೆ ಬಂದು ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…