ಉಡುಪಿ: ನಕಲಿ ಕಾರ್ಮಿಕ ಕಾರ್ಡ್ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ನಕಲಿ ಕಾರ್ಮಿಕ ಕಾರ್ಡ್ ಗಳನ್ನು ಪತ್ತೆಹಚ್ಚಲು ಇಲಾಖೆ ಮುಂದಾಗಿದ್ದು ಈ ವರೆಗೆ ಉಭಯ ಜಿಲ್ಲೆಯಲ್ಲಿ 1,286 ನಕಲಿ ಕಾರ್ಡ್ ಗಳನ್ನು ಅಮಾನತುಗೊಳಿಸಲಾಗಿದೆ.
ರಾಜ್ಯದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 2,46,951 ಕಾರ್ಡ್ ನಕಲಿ ಎಂದು ಪಟ್ಟಿ ಮಾಡಿ ಕಾರ್ಮಿಕ ಇಲಾಖೆ ಈ ಎಲ್ಲ ಕಾರ್ಡ್ಗಳನ್ನು ಅಮಾನತುಗೊಳಿಸಿದೆ.
ಕಾರ್ಮಿಕರಲ್ಲದವರು ನಕಲಿ ಕಾರ್ಡ್ಗಳನ್ನು ಮಾಡಿಸಿ ಸರಕಾರದ ಯೋಜನೆಗಳ ಲಾಭ ಪಡೆಯು ತ್ತಿರುವ ಬಗ್ಗೆ ಇಲಾಖೆಗೆ ದೂರುಗಳು ಬಂದಿದ್ದವು. ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್ಗಳು ಪತ್ತೆಯಾಗಿದೆ.
ಮಾನದಂಡಗಳೇನು?
ನಿರ್ಮಾಣಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರಬೇಕು. ಪ್ಲಂಬರ್, ಪೇಂಟಿಂಗ್, ರಸ್ತೆ ನಿರ್ಮಾಣ, ಇಟ್ಟಿಗೆ ನಿರ್ಮಾಣ ಸೇರಿ 56 ವೃತ್ತಿ ಮಾಡುವವರು ಈ ಕಾರ್ಡ್ ಪಡೆಯಲು ಅರ್ಹರಾಗಿದ್ದಾರೆ.ನಿರ್ಮಾಣಕ್ಕೆ ಸಂಬಂಧಪಟ್ಟಂತೆ 90 ದಿನ ಕೆಲಸ ಮಾಡಿದ್ದರೆ ಅಂತವರು ಕಾರ್ಮಿಕರ ಕಾರ್ಡ್ ಪಡೆಯಲು ಅರ್ಹರು.
ಪ್ರತೀ ವರ್ಷ 1,800 ಕೋಟಿ ರೂ. ಹಣವನ್ನು ಈ ಯೋಜನೆಗಳಿಗೆ ಮೀಸಲಿಡುವ ಇಲಾಖೆ 1,800 ರೂ. ಕೋಟಿ ಪೈಕಿ 1,209 ಕೋಟಿ ರೂ.ಗಳನ್ನು ಫಲಾನುಭವಿಗಳಿಗೆ ನೀಡುತ್ತಿದೆ.
ಎಲ್ಲೆಲ್ಲಿ ಎಷ್ಟೆಷ್ಟು ಕಾರ್ಡ್ ರದ್ದಾಗಲಿದೆ
ಬೆಂ.ಗ್ರಾಮಾಂತರ 402, ಬೆಂ.ನಗರ 2,967, ಬಾಗಲಕೋಟೆ 2,039, ಬೆಳಗಾವಿ 1,136, ಬಳ್ಳಾರಿ 1,498, ಬೀದರ್ 25,759, ವಿಜಯಪುರ 2,097, ಚಾಮರಾಜನಗರ 743, ಚಿಕ್ಕಬಳ್ಳಾಪುರ 1,242, ಚಿಕ್ಕಮಗಳೂರು 1,173, ಚಿತ್ರದುರ್ಗ 859, ದಕ್ಷಿಣ ಕನ್ನಡ 1,076, ದಾವಣಗೆರೆ 3,659, ಧಾರವಾಡ 3,503, ಗದಗ 3,051, ಕಲಬುರಗಿ 2,280, ಹಾಸನ 2,266, ಹಾವೇರಿ 1,69,180, ಕೊಡಗು 175, ಕೋಲಾರ 1988, ಕೊಪ್ಪಳ 2083, ಮಂಡ್ಯ 396, ಮೈಸೂರು 1,316, ರಾಯಚೂರು 383, ರಾಮನಗರ 2748, ಶಿವಮೊಗ್ಗ 6,900, ತುಮಕೂರು 1,210, ಉಡುಪಿ 210, ಉತ್ತರ ಕನ್ನಡ 4,155.
ಕಾರ್ಮಿಕ ಕಾರ್ಡ್ಗಳ ದುರುಪಯೋಗ ಸಲ್ಲದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
– ಕಮಲ್ ಶಾ ಅಲ್ತಫ್ ಅಹಮ್ಮದ್,
ಜಿಲ್ಲಾ ಕಾರ್ಮಿಕ ಅಧಿಕಾರಿ, ಉಡುಪಿ
-ಬಾಲಕೃಷ್ಣ ಭೀಮಗುಳಿ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…