Featured

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು – vishwanews24

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು

ಉಡುಪಿ: ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ನಕಲಿ ಕಾರ್ಮಿಕ ಕಾರ್ಡ್‌ ಗಳನ್ನು ಪತ್ತೆಹಚ್ಚಲು ಇಲಾಖೆ ಮುಂದಾಗಿದ್ದು ಈ ವರೆಗೆ ಉಭಯ ಜಿಲ್ಲೆಯಲ್ಲಿ 1,286 ನಕಲಿ ಕಾರ್ಡ್‌ ಗಳನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 2,46,951 ಕಾರ್ಡ್‌ ನಕಲಿ ಎಂದು ಪಟ್ಟಿ ಮಾಡಿ ಕಾರ್ಮಿಕ ಇಲಾಖೆ ಈ ಎಲ್ಲ ಕಾರ್ಡ್‌ಗಳನ್ನು ಅಮಾನತುಗೊಳಿಸಿದೆ.
ಕಾರ್ಮಿಕರಲ್ಲದವರು ನಕಲಿ ಕಾರ್ಡ್‌ಗಳನ್ನು ಮಾಡಿಸಿ ಸರಕಾರದ ಯೋಜನೆಗಳ ಲಾಭ ಪಡೆಯು ತ್ತಿರುವ ಬಗ್ಗೆ ಇಲಾಖೆಗೆ ದೂರುಗಳು ಬಂದಿದ್ದವು. ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್‌ಗಳು ಪತ್ತೆಯಾಗಿದೆ.

 

ಮಾನದಂಡಗಳೇನು?
ನಿರ್ಮಾಣಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರಬೇಕು. ಪ್ಲಂಬರ್‌, ಪೇಂಟಿಂಗ್‌, ರಸ್ತೆ ನಿರ್ಮಾಣ, ಇಟ್ಟಿಗೆ ನಿರ್ಮಾಣ ಸೇರಿ 56 ವೃತ್ತಿ ಮಾಡುವವರು ಈ ಕಾರ್ಡ್‌ ಪಡೆಯಲು ಅರ್ಹರಾಗಿದ್ದಾರೆ.ನಿರ್ಮಾಣಕ್ಕೆ ಸಂಬಂಧಪಟ್ಟಂತೆ 90 ದಿನ ಕೆಲಸ ಮಾಡಿದ್ದರೆ ಅಂತವರು ಕಾರ್ಮಿಕರ ಕಾರ್ಡ್‌ ಪಡೆಯಲು ಅರ್ಹರು.
ಪ್ರತೀ ವರ್ಷ 1,800 ಕೋಟಿ ರೂ. ಹಣವನ್ನು ಈ ಯೋಜನೆಗಳಿಗೆ ಮೀಸಲಿಡುವ ಇಲಾಖೆ 1,800 ರೂ. ಕೋಟಿ ಪೈಕಿ 1,209 ಕೋಟಿ ರೂ.ಗಳನ್ನು ಫ‌ಲಾನುಭವಿಗಳಿಗೆ ನೀಡುತ್ತಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಕಾರ್ಡ್‌ ರದ್ದಾಗಲಿದೆ
ಬೆಂ.ಗ್ರಾಮಾಂತರ 402, ಬೆಂ.ನಗರ 2,967, ಬಾಗಲಕೋಟೆ 2,039, ಬೆಳಗಾವಿ 1,136, ಬಳ್ಳಾರಿ 1,498, ಬೀದರ್‌ 25,759, ವಿಜಯಪುರ 2,097, ಚಾಮರಾಜನಗರ 743, ಚಿಕ್ಕಬಳ್ಳಾಪುರ 1,242, ಚಿಕ್ಕಮಗಳೂರು 1,173, ಚಿತ್ರದುರ್ಗ 859, ದಕ್ಷಿಣ ಕನ್ನಡ 1,076, ದಾವಣಗೆರೆ 3,659, ಧಾರವಾಡ 3,503, ಗದಗ 3,051, ಕಲಬುರಗಿ 2,280, ಹಾಸನ 2,266, ಹಾವೇರಿ 1,69,180, ಕೊಡಗು 175, ಕೋಲಾರ 1988, ಕೊಪ್ಪಳ 2083, ಮಂಡ್ಯ 396, ಮೈಸೂರು 1,316, ರಾಯಚೂರು 383, ರಾಮನಗರ 2748, ಶಿವಮೊಗ್ಗ 6,900, ತುಮಕೂರು 1,210, ಉಡುಪಿ 210, ಉತ್ತರ ಕನ್ನಡ 4,155.

ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಸಲ್ಲದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
– ಕಮಲ್‌ ಶಾ ಅಲ್ತಫ್ ಅಹಮ್ಮದ್‌,
ಜಿಲ್ಲಾ ಕಾರ್ಮಿಕ ಅಧಿಕಾರಿ, ಉಡುಪಿ
-ಬಾಲಕೃಷ್ಣ ಭೀಮಗುಳಿ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

18 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

18 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

18 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

20 hours ago