Featured

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು – vishwanews24

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು

ಉಡುಪಿ: ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ನಕಲಿ ಕಾರ್ಮಿಕ ಕಾರ್ಡ್‌ ಗಳನ್ನು ಪತ್ತೆಹಚ್ಚಲು ಇಲಾಖೆ ಮುಂದಾಗಿದ್ದು ಈ ವರೆಗೆ ಉಭಯ ಜಿಲ್ಲೆಯಲ್ಲಿ 1,286 ನಕಲಿ ಕಾರ್ಡ್‌ ಗಳನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 2,46,951 ಕಾರ್ಡ್‌ ನಕಲಿ ಎಂದು ಪಟ್ಟಿ ಮಾಡಿ ಕಾರ್ಮಿಕ ಇಲಾಖೆ ಈ ಎಲ್ಲ ಕಾರ್ಡ್‌ಗಳನ್ನು ಅಮಾನತುಗೊಳಿಸಿದೆ.
ಕಾರ್ಮಿಕರಲ್ಲದವರು ನಕಲಿ ಕಾರ್ಡ್‌ಗಳನ್ನು ಮಾಡಿಸಿ ಸರಕಾರದ ಯೋಜನೆಗಳ ಲಾಭ ಪಡೆಯು ತ್ತಿರುವ ಬಗ್ಗೆ ಇಲಾಖೆಗೆ ದೂರುಗಳು ಬಂದಿದ್ದವು. ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್‌ಗಳು ಪತ್ತೆಯಾಗಿದೆ.

 

ಮಾನದಂಡಗಳೇನು?
ನಿರ್ಮಾಣಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರಬೇಕು. ಪ್ಲಂಬರ್‌, ಪೇಂಟಿಂಗ್‌, ರಸ್ತೆ ನಿರ್ಮಾಣ, ಇಟ್ಟಿಗೆ ನಿರ್ಮಾಣ ಸೇರಿ 56 ವೃತ್ತಿ ಮಾಡುವವರು ಈ ಕಾರ್ಡ್‌ ಪಡೆಯಲು ಅರ್ಹರಾಗಿದ್ದಾರೆ.ನಿರ್ಮಾಣಕ್ಕೆ ಸಂಬಂಧಪಟ್ಟಂತೆ 90 ದಿನ ಕೆಲಸ ಮಾಡಿದ್ದರೆ ಅಂತವರು ಕಾರ್ಮಿಕರ ಕಾರ್ಡ್‌ ಪಡೆಯಲು ಅರ್ಹರು.
ಪ್ರತೀ ವರ್ಷ 1,800 ಕೋಟಿ ರೂ. ಹಣವನ್ನು ಈ ಯೋಜನೆಗಳಿಗೆ ಮೀಸಲಿಡುವ ಇಲಾಖೆ 1,800 ರೂ. ಕೋಟಿ ಪೈಕಿ 1,209 ಕೋಟಿ ರೂ.ಗಳನ್ನು ಫ‌ಲಾನುಭವಿಗಳಿಗೆ ನೀಡುತ್ತಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಕಾರ್ಡ್‌ ರದ್ದಾಗಲಿದೆ
ಬೆಂ.ಗ್ರಾಮಾಂತರ 402, ಬೆಂ.ನಗರ 2,967, ಬಾಗಲಕೋಟೆ 2,039, ಬೆಳಗಾವಿ 1,136, ಬಳ್ಳಾರಿ 1,498, ಬೀದರ್‌ 25,759, ವಿಜಯಪುರ 2,097, ಚಾಮರಾಜನಗರ 743, ಚಿಕ್ಕಬಳ್ಳಾಪುರ 1,242, ಚಿಕ್ಕಮಗಳೂರು 1,173, ಚಿತ್ರದುರ್ಗ 859, ದಕ್ಷಿಣ ಕನ್ನಡ 1,076, ದಾವಣಗೆರೆ 3,659, ಧಾರವಾಡ 3,503, ಗದಗ 3,051, ಕಲಬುರಗಿ 2,280, ಹಾಸನ 2,266, ಹಾವೇರಿ 1,69,180, ಕೊಡಗು 175, ಕೋಲಾರ 1988, ಕೊಪ್ಪಳ 2083, ಮಂಡ್ಯ 396, ಮೈಸೂರು 1,316, ರಾಯಚೂರು 383, ರಾಮನಗರ 2748, ಶಿವಮೊಗ್ಗ 6,900, ತುಮಕೂರು 1,210, ಉಡುಪಿ 210, ಉತ್ತರ ಕನ್ನಡ 4,155.

ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಸಲ್ಲದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
– ಕಮಲ್‌ ಶಾ ಅಲ್ತಫ್ ಅಹಮ್ಮದ್‌,
ಜಿಲ್ಲಾ ಕಾರ್ಮಿಕ ಅಧಿಕಾರಿ, ಉಡುಪಿ
-ಬಾಲಕೃಷ್ಣ ಭೀಮಗುಳಿ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago