Featured

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು – vishwanews24

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು

ಉಡುಪಿ: ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ನಕಲಿ ಕಾರ್ಮಿಕ ಕಾರ್ಡ್‌ ಗಳನ್ನು ಪತ್ತೆಹಚ್ಚಲು ಇಲಾಖೆ ಮುಂದಾಗಿದ್ದು ಈ ವರೆಗೆ ಉಭಯ ಜಿಲ್ಲೆಯಲ್ಲಿ 1,286 ನಕಲಿ ಕಾರ್ಡ್‌ ಗಳನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 2,46,951 ಕಾರ್ಡ್‌ ನಕಲಿ ಎಂದು ಪಟ್ಟಿ ಮಾಡಿ ಕಾರ್ಮಿಕ ಇಲಾಖೆ ಈ ಎಲ್ಲ ಕಾರ್ಡ್‌ಗಳನ್ನು ಅಮಾನತುಗೊಳಿಸಿದೆ.
ಕಾರ್ಮಿಕರಲ್ಲದವರು ನಕಲಿ ಕಾರ್ಡ್‌ಗಳನ್ನು ಮಾಡಿಸಿ ಸರಕಾರದ ಯೋಜನೆಗಳ ಲಾಭ ಪಡೆಯು ತ್ತಿರುವ ಬಗ್ಗೆ ಇಲಾಖೆಗೆ ದೂರುಗಳು ಬಂದಿದ್ದವು. ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್‌ಗಳು ಪತ್ತೆಯಾಗಿದೆ.

 

ಮಾನದಂಡಗಳೇನು?
ನಿರ್ಮಾಣಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರಬೇಕು. ಪ್ಲಂಬರ್‌, ಪೇಂಟಿಂಗ್‌, ರಸ್ತೆ ನಿರ್ಮಾಣ, ಇಟ್ಟಿಗೆ ನಿರ್ಮಾಣ ಸೇರಿ 56 ವೃತ್ತಿ ಮಾಡುವವರು ಈ ಕಾರ್ಡ್‌ ಪಡೆಯಲು ಅರ್ಹರಾಗಿದ್ದಾರೆ.ನಿರ್ಮಾಣಕ್ಕೆ ಸಂಬಂಧಪಟ್ಟಂತೆ 90 ದಿನ ಕೆಲಸ ಮಾಡಿದ್ದರೆ ಅಂತವರು ಕಾರ್ಮಿಕರ ಕಾರ್ಡ್‌ ಪಡೆಯಲು ಅರ್ಹರು.
ಪ್ರತೀ ವರ್ಷ 1,800 ಕೋಟಿ ರೂ. ಹಣವನ್ನು ಈ ಯೋಜನೆಗಳಿಗೆ ಮೀಸಲಿಡುವ ಇಲಾಖೆ 1,800 ರೂ. ಕೋಟಿ ಪೈಕಿ 1,209 ಕೋಟಿ ರೂ.ಗಳನ್ನು ಫ‌ಲಾನುಭವಿಗಳಿಗೆ ನೀಡುತ್ತಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಕಾರ್ಡ್‌ ರದ್ದಾಗಲಿದೆ
ಬೆಂ.ಗ್ರಾಮಾಂತರ 402, ಬೆಂ.ನಗರ 2,967, ಬಾಗಲಕೋಟೆ 2,039, ಬೆಳಗಾವಿ 1,136, ಬಳ್ಳಾರಿ 1,498, ಬೀದರ್‌ 25,759, ವಿಜಯಪುರ 2,097, ಚಾಮರಾಜನಗರ 743, ಚಿಕ್ಕಬಳ್ಳಾಪುರ 1,242, ಚಿಕ್ಕಮಗಳೂರು 1,173, ಚಿತ್ರದುರ್ಗ 859, ದಕ್ಷಿಣ ಕನ್ನಡ 1,076, ದಾವಣಗೆರೆ 3,659, ಧಾರವಾಡ 3,503, ಗದಗ 3,051, ಕಲಬುರಗಿ 2,280, ಹಾಸನ 2,266, ಹಾವೇರಿ 1,69,180, ಕೊಡಗು 175, ಕೋಲಾರ 1988, ಕೊಪ್ಪಳ 2083, ಮಂಡ್ಯ 396, ಮೈಸೂರು 1,316, ರಾಯಚೂರು 383, ರಾಮನಗರ 2748, ಶಿವಮೊಗ್ಗ 6,900, ತುಮಕೂರು 1,210, ಉಡುಪಿ 210, ಉತ್ತರ ಕನ್ನಡ 4,155.

ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಸಲ್ಲದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
– ಕಮಲ್‌ ಶಾ ಅಲ್ತಫ್ ಅಹಮ್ಮದ್‌,
ಜಿಲ್ಲಾ ಕಾರ್ಮಿಕ ಅಧಿಕಾರಿ, ಉಡುಪಿ
-ಬಾಲಕೃಷ್ಣ ಭೀಮಗುಳಿ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

22 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago