ಚಿತ್ರದುರ್ಗ: ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು? ನಕ್ಸಲರು ಬರಿಗೈನಲ್ಲಿ ಶರಣಾಗಿದ್ದಾರೆ. ಅವರ ಶಸ್ತ್ರಾಸ್ತ್ರ ಎಲ್ಲೋದವು? ಇವರ ಹಿಂದೆ ಇನ್ನೂ ನಕ್ಸಲಿರಿದ್ದಾರಾ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ. ದಲಿತ ಮಾಫಿಯಾ ಕಾಂಗ್ರೆಸ್ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು ಎಂದರು.
ಮುಂದುವರೆದು ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ. ಇವರಲ್ಲಿ ಎರಡು ಗುಂಪುಗಳಿವೆ. ಒಂದು ದಲಿತ ವಿರೋಧಿ ಮಾಫಿಯಾವಿದೆ. ಇನ್ನೊಂದು ದಲಿತ ಮಾಫಿಯಾವಿದೆ. ಇವರೆಲ್ಲರೂ ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ. ಕಾಂಗ್ರೆಸ್ನಲ್ಲಿ ದಲಿತರಿಗೆ ಬೆಲೆ ಇಲ್ಲ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…