Featured

ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು; ಸಿಎಂ ಮುಂದೆ  ಶರಣಾಗತಿ ಸರಿಯಲ್ಲ : ಛಲವಾದಿ ನಾರಾಯಣಸ್ವಾಮಿ – vishwanews24

ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು ಸಿಎಂ ಮುಂದೆ  ಶರಣಾಗತಿ ಸರಿಯಲ್ಲ : ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು? ನಕ್ಸಲರು ಬರಿಗೈನಲ್ಲಿ ಶರಣಾಗಿದ್ದಾರೆ. ಅವರ ಶಸ್ತ್ರಾಸ್ತ್ರ ಎಲ್ಲೋದವು? ಇವರ ಹಿಂದೆ ಇನ್ನೂ ನಕ್ಸಲಿರಿದ್ದಾರಾ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ. ದಲಿತ ಮಾಫಿಯಾ ಕಾಂಗ್ರೆಸ್‌ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು ಎಂದರು.

ಮುಂದುವರೆದು ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ. ಇವರಲ್ಲಿ ಎರಡು ಗುಂಪುಗಳಿವೆ. ಒಂದು ದಲಿತ ವಿರೋಧಿ ಮಾಫಿಯಾವಿದೆ. ಇನ್ನೊಂದು ದಲಿತ ಮಾಫಿಯಾವಿದೆ. ಇವರೆಲ್ಲರೂ ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ. ಕಾಂಗ್ರೆಸ್‌ನಲ್ಲಿ ದಲಿತರಿಗೆ ಬೆಲೆ ಇಲ್ಲ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

8 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

12 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

12 hours ago