Featured

ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು; ಸಿಎಂ ಮುಂದೆ  ಶರಣಾಗತಿ ಸರಿಯಲ್ಲ : ಛಲವಾದಿ ನಾರಾಯಣಸ್ವಾಮಿ – vishwanews24

ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು ಸಿಎಂ ಮುಂದೆ  ಶರಣಾಗತಿ ಸರಿಯಲ್ಲ : ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು? ನಕ್ಸಲರು ಬರಿಗೈನಲ್ಲಿ ಶರಣಾಗಿದ್ದಾರೆ. ಅವರ ಶಸ್ತ್ರಾಸ್ತ್ರ ಎಲ್ಲೋದವು? ಇವರ ಹಿಂದೆ ಇನ್ನೂ ನಕ್ಸಲಿರಿದ್ದಾರಾ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ. ದಲಿತ ಮಾಫಿಯಾ ಕಾಂಗ್ರೆಸ್‌ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು ಎಂದರು.

ಮುಂದುವರೆದು ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ. ಇವರಲ್ಲಿ ಎರಡು ಗುಂಪುಗಳಿವೆ. ಒಂದು ದಲಿತ ವಿರೋಧಿ ಮಾಫಿಯಾವಿದೆ. ಇನ್ನೊಂದು ದಲಿತ ಮಾಫಿಯಾವಿದೆ. ಇವರೆಲ್ಲರೂ ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ. ಕಾಂಗ್ರೆಸ್‌ನಲ್ಲಿ ದಲಿತರಿಗೆ ಬೆಲೆ ಇಲ್ಲ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago