Featured

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ?: ಗೃಹ ಸಚಿವ ಪರಮೇಶ್ವರ್‌ – vishwanews24

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ? ಜಿ.ಪರಮೇಶ್ವರ್‌

ಬೆಂಗಳೂರು: ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ನಕ್ಸಲರ‌ ಪರಿವರ್ತನೆಗೆ ಸರಕಾರ ಅವಕಾಶ ಕೊಟ್ಟಿದೆ. ಅದರಲ್ಲಿ ತಪ್ಪೇನಿದೆ‌. ಬಿಜೆಪಿ ಶಾಸಕ‌ ಸುನೀಲ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ. ಎಎನ್ಎಫ್ ಕಾರ್ಕಳದಲ್ಲಿ ಇದೆಯಲ್ಲವೇ?ʼ ಎಂದು ಪ್ರಶ್ನಿಸಿದರು.

ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಶರಣಾದ ನಕ್ಸಲರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳಿವೆ. ಆ ರಾಜ್ಯದ ಸರಕಾರಗಳು ಸಹ ತೀರ್ಮಾನ ಕೈಗೊಳ್ಳಬೇಕು ಎಂದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

7 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago