Featured

ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ : ಡಾ. ಜಿ ಪರಮೇಶ್ವರ್  – vishwanews24

ಶರಣಾಗತರಾಗಿರುವ ನಕ್ಸಲರ  ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ : ಡಾ. ಜಿ ಪರಮೇಶ್ವರ್

ಬೆಂಗಳೂರು : ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆʼ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ನಕ್ಸಲರ ಶಸ್ತ್ರಾಸ್ತ್ರ ದ ಕುರಿತ ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ʼಕಾಡಿನಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ಪೊಲೀಸರು ಹುಡುಕುತ್ತಾರೆ. ನಾವು ಮಾಡುವ ಕೆಲಸ ಮಾಡುತ್ತೇವೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ‌ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ?ʼ ಎಂದರು.

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ʼಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದರೆʼ ಎಂದು ಹೇಳಿದರು.

ಎನ್‌ಕೌಂಟರ್‌ನಲ್ಲಿ‌ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago